<p><strong>ಭದ್ರಾವತಿ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ ಇಲ್ಲಿನ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>2022ರಲ್ಲಿ ತಾಲ್ಲೂಕಿನ ಗ್ರಾಮವೊಂದರ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಶಿವಮೊಗ್ಗದ ಎಫ್ಟಿಎಸ್ಸಿ-1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ.ಪಾಟೀಲರವರು ಆರೋಪಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ₹ 80 ಸಾವಿರ ದಂಡ ವಿಧಿಸಿದ್ದಾರೆ. ಈ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಒದಗಿಸುವಂತೆ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ವಕೀಲ ಎಚ್.ಆರ್.ಶ್ರೀಧರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ ಇಲ್ಲಿನ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>2022ರಲ್ಲಿ ತಾಲ್ಲೂಕಿನ ಗ್ರಾಮವೊಂದರ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಶಿವಮೊಗ್ಗದ ಎಫ್ಟಿಎಸ್ಸಿ-1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ.ಪಾಟೀಲರವರು ಆರೋಪಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ₹ 80 ಸಾವಿರ ದಂಡ ವಿಧಿಸಿದ್ದಾರೆ. ಈ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಒದಗಿಸುವಂತೆ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ವಕೀಲ ಎಚ್.ಆರ್.ಶ್ರೀಧರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>