ಶಿವಮೊಗ್ಗ: ವಿದ್ಯಾನಗರದಲ್ಲಿ ಶನಿವಾರ ರಾತ್ರಿ ಸುಭಾಷ್ ನಗರದ ನಿವಾಸಿ ಜ್ಞಾನೇಶ್ವರ್ (45) ಅವರನ್ನು ಕೊಲೆ ಮಾಡಲಾಗಿದೆ.
ವಿದ್ಯಾನಗರದ ಸಂಬಂಧಿಕರ ಮನೆಗೆ ಜ್ಞಾನೇಶ್ವರ್ ತೆರಳಿದ್ದರು. ಆಗ ಕುಡಿದ ಮತ್ತಿನಲ್ಲಿ ಸಂಬಂಧಿಕರ ಜೊತೆಗೆ ಜಗಳ ನಡೆದಿದೆ. ಆ ಸಮಯದಲ್ಲಿ ಸಂಬಂಧಿಯೇ ಜ್ಞಾನೇಶ್ವರ್ ಅವರನ್ನು ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಭಾನುವಾರ ಬೆಳಿಗ್ಗೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಮಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.