<p>ಶಿವಮೊಗ್ಗ: ಆಲಿಕಲ್ಲು ಮಳೆ, ಬಿರುಗಾಳಿಯು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳೆಹೊನ್ನೂರು, ಆನವೇರಿ, ಕಲ್ಲಿಹಾಳ ಹೋಬಳಿಗಳ ರೈತರ ಬದುಕನ್ನು ನಾಶ ಮಾಡಿದೆ. ಪ್ರತೀ ಹೆಕ್ಟೇರ್ಗೆ ₹1.25 ಲಕ್ಷ ಪರಿಹಾರದ ವಿಶೇಷ ಪ್ಯಾಕೇಜ್ ಘೋಷಿಸಿ ನೊಂದವರ ನೆರವಿಗೆ ಸರ್ಕಾರ ಬರಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.</p>.<p>ಮೂರು ಹೋಬಳಿಗಳ 35ಕ್ಕೂ ಹೆಚ್ಚು ಗ್ರಾಮಗಳಲ್ಲಿ ಬಿರುಗಾಳಿ ಮತ್ತು ಮಳೆಯಿಂದ ಅಂದಾಜು 6 ಸಾವಿರ ಹೆಕ್ಟೇರ್ನಷ್ಟು ಪ್ರದೇಶದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಹಾನಿಗೀಡಾಗಿದೆ. ರಾಜ್ಯ ಸರ್ಕಾರ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ಯಾಕೇಜ್ ಘೋಷಣೆ ಮಾಡಬೇಕು. ಇದರಿಂದ ರೈತರಿಗೆ ಪ್ರತೀ ಎಕರೆಗೆ ₹50,000 ಪರಿಹಾರ ಲಭ್ಯವಾಗಲಿದೆ ಎಂದು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಹಾನಿ ಆಗಿರುವ ಪ್ರದೇಶದ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದ್ದೇನೆ. ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ, ಪಕ್ಷದ ಮಂಡಲ ಅಧ್ಯಕ್ಷ ಮಲ್ಲೇಶಪ್ಪ ನೇತೃತ್ವದ ಬಿಜೆಪಿಯ ತಂಡ ಸುತ್ತಾಡಿ ಪ್ರಾಥಮಿಕ ವರದಿ ಸಿದ್ಧಪಡಿಸಿದೆ. ಹೊಳೆಹೊನ್ನೂರು ಸೇರಿದಂತೆ ಮೂರು ಹೋಬಳಿಗಳಲ್ಲಿ ಹಾನಿಯಾಗಿದೆ. ಹೊಳಲೂರು, ಹಾರನಹಳ್ಳಿ ಭಾಗದ ಅಂದಾಜು 25 ಗ್ರಾಮಗಳಲ್ಲೂ ಹಾನಿಯಾಗಿದೆ ಎಂದರು.</p>.<p>ಬೆಳೆದು ನಿಂತ ಅಡಿಕೆ ಮರಗಳಲ್ಲಿ ಕೊಯ್ಲಿಗೆ ಬಂದಿದ್ದ ಫಸಲು ಇತ್ತು. ಅವೆಲ್ಲ ಗೊನೆ ಸಹಿತ ಮುರಿದು ಬಿದ್ದಿವೆ. ಮನೆಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ. ಗೃಹೋಪಯೋಗಿ ವಸ್ತುಗಳೂ ಹಾಳಾಗಿವೆ. ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಆ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಹೇಳಿದರು.</p>.<p>ಇಂತಹ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಇದಕ್ಕೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನಿಂದ ಪ್ರತಿ ಹೆಕ್ಟೇರ್ಗೆ ₹33,000 ಪರಿಹಾರ ನೀಡಬೇಕು ಎಂಬ ನಿಯಮವಿದೆ. ಪರಿಹಾರದ ಮೊತ್ತದಲ್ಲಿ ಕೇಂದ್ರ ಸರ್ಕಾರ ಶೇ 75ರಷ್ಟು, ರಾಜ್ಯ ಸರ್ಕಾರ ಶೇ 25ರಷ್ಟು ಪಾಲು ನೀಡಬೇಕು ಎಂಬ ನಿಯಮವಿದೆ. ಆದರೆ ಹಾನಿಯನ್ನು ಗಮನಿಸಿದಾಗ ಈ ಮೊತ್ತದ ಪರಿಹಾರ ಸಾಕಾಗುವುದಿಲ್ಲ.</p>.<p>ಈ ಹಿಂದೆ ಮನೆಗಳು ಹಾನಿಗೀಡಾದರೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಪ್ರತಿ ಮನೆಗೆ ₹1,25,000 ಪರಿಹಾರ ನೀಡಲಾಗುತ್ತಿತ್ತು. 2019ರಲ್ಲಿ ಮಹಾ ಮಳೆಯ ಸಂದರ್ಭ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರು ಪರಿಹಾರ ಮೊತ್ತವನ್ನು ₹5 ಲಕ್ಷಕ್ಕೆ ಹೆಚ್ಚಿಸಿದ್ದರು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ತನ್ನ ವಿಶೇಷ ಅಧಿಕಾರ ಬಳಸಿ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಪ್ರಮುಖರಾದ ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಮಾಲತೇಶ್, ಹರಿಕೃಷ್ಣ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-42-752516299</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಆಲಿಕಲ್ಲು ಮಳೆ, ಬಿರುಗಾಳಿಯು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳೆಹೊನ್ನೂರು, ಆನವೇರಿ, ಕಲ್ಲಿಹಾಳ ಹೋಬಳಿಗಳ ರೈತರ ಬದುಕನ್ನು ನಾಶ ಮಾಡಿದೆ. ಪ್ರತೀ ಹೆಕ್ಟೇರ್ಗೆ ₹1.25 ಲಕ್ಷ ಪರಿಹಾರದ ವಿಶೇಷ ಪ್ಯಾಕೇಜ್ ಘೋಷಿಸಿ ನೊಂದವರ ನೆರವಿಗೆ ಸರ್ಕಾರ ಬರಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.</p>.<p>ಮೂರು ಹೋಬಳಿಗಳ 35ಕ್ಕೂ ಹೆಚ್ಚು ಗ್ರಾಮಗಳಲ್ಲಿ ಬಿರುಗಾಳಿ ಮತ್ತು ಮಳೆಯಿಂದ ಅಂದಾಜು 6 ಸಾವಿರ ಹೆಕ್ಟೇರ್ನಷ್ಟು ಪ್ರದೇಶದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಹಾನಿಗೀಡಾಗಿದೆ. ರಾಜ್ಯ ಸರ್ಕಾರ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ಯಾಕೇಜ್ ಘೋಷಣೆ ಮಾಡಬೇಕು. ಇದರಿಂದ ರೈತರಿಗೆ ಪ್ರತೀ ಎಕರೆಗೆ ₹50,000 ಪರಿಹಾರ ಲಭ್ಯವಾಗಲಿದೆ ಎಂದು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಹಾನಿ ಆಗಿರುವ ಪ್ರದೇಶದ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದ್ದೇನೆ. ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ, ಪಕ್ಷದ ಮಂಡಲ ಅಧ್ಯಕ್ಷ ಮಲ್ಲೇಶಪ್ಪ ನೇತೃತ್ವದ ಬಿಜೆಪಿಯ ತಂಡ ಸುತ್ತಾಡಿ ಪ್ರಾಥಮಿಕ ವರದಿ ಸಿದ್ಧಪಡಿಸಿದೆ. ಹೊಳೆಹೊನ್ನೂರು ಸೇರಿದಂತೆ ಮೂರು ಹೋಬಳಿಗಳಲ್ಲಿ ಹಾನಿಯಾಗಿದೆ. ಹೊಳಲೂರು, ಹಾರನಹಳ್ಳಿ ಭಾಗದ ಅಂದಾಜು 25 ಗ್ರಾಮಗಳಲ್ಲೂ ಹಾನಿಯಾಗಿದೆ ಎಂದರು.</p>.<p>ಬೆಳೆದು ನಿಂತ ಅಡಿಕೆ ಮರಗಳಲ್ಲಿ ಕೊಯ್ಲಿಗೆ ಬಂದಿದ್ದ ಫಸಲು ಇತ್ತು. ಅವೆಲ್ಲ ಗೊನೆ ಸಹಿತ ಮುರಿದು ಬಿದ್ದಿವೆ. ಮನೆಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ. ಗೃಹೋಪಯೋಗಿ ವಸ್ತುಗಳೂ ಹಾಳಾಗಿವೆ. ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಆ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಹೇಳಿದರು.</p>.<p>ಇಂತಹ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಇದಕ್ಕೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನಿಂದ ಪ್ರತಿ ಹೆಕ್ಟೇರ್ಗೆ ₹33,000 ಪರಿಹಾರ ನೀಡಬೇಕು ಎಂಬ ನಿಯಮವಿದೆ. ಪರಿಹಾರದ ಮೊತ್ತದಲ್ಲಿ ಕೇಂದ್ರ ಸರ್ಕಾರ ಶೇ 75ರಷ್ಟು, ರಾಜ್ಯ ಸರ್ಕಾರ ಶೇ 25ರಷ್ಟು ಪಾಲು ನೀಡಬೇಕು ಎಂಬ ನಿಯಮವಿದೆ. ಆದರೆ ಹಾನಿಯನ್ನು ಗಮನಿಸಿದಾಗ ಈ ಮೊತ್ತದ ಪರಿಹಾರ ಸಾಕಾಗುವುದಿಲ್ಲ.</p>.<p>ಈ ಹಿಂದೆ ಮನೆಗಳು ಹಾನಿಗೀಡಾದರೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಪ್ರತಿ ಮನೆಗೆ ₹1,25,000 ಪರಿಹಾರ ನೀಡಲಾಗುತ್ತಿತ್ತು. 2019ರಲ್ಲಿ ಮಹಾ ಮಳೆಯ ಸಂದರ್ಭ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರು ಪರಿಹಾರ ಮೊತ್ತವನ್ನು ₹5 ಲಕ್ಷಕ್ಕೆ ಹೆಚ್ಚಿಸಿದ್ದರು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ತನ್ನ ವಿಶೇಷ ಅಧಿಕಾರ ಬಳಸಿ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಪ್ರಮುಖರಾದ ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಮಾಲತೇಶ್, ಹರಿಕೃಷ್ಣ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-42-752516299</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>