<p><strong>ಸಾಗರ</strong>: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಾಲ್ಲೂಕು ಆಡಳಿತ ಕೂಡಲೆ ₹5 ಲಕ್ಷ ಪರಿಹಾರ ವಿತರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಒತ್ತಾಯಿಸಿದ್ದಾರೆ. </p>.<p>ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಗರ ತಾಲ್ಲೂಕಿನಲ್ಲಿ 48, ಹೊಸನಗರ ವ್ಯಾಪ್ತಿಯಲ್ಲಿ 27 ಮನೆಗಳಿಗೆ ಹಾನಿ ಉಂಟಾಗಿದೆ. ತಕ್ಷಣ ಪರಿಹಾರ ಕೊಡುವ ಬದಲು ಅಧಿಕಾರಿಗಳು ನೋವಿನಲ್ಲಿರುವವರ ಮನೆಗೆ ಸಂಬಂಧಪಟ್ಟ ದಾಖಲೆ ಕೇಳುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.</p>.<p>ಮಲೆನಾಡು ಭಾಗದಲ್ಲಿ ಹೆಚ್ಚಿನ ಬಡವರ ಮನೆಗಳಿಗೆ ದಾಖಲೆಗಳು ಇರುವುದಿಲ್ಲ. ಮಳೆ ಹೆಚ್ಚಾದಾಗ ತೊಂದರೆಗೆ ಒಳಗಾಗುವವರು ಈ ವರ್ಗದವರೇ. ಹೀಗಿರುವಾಗ ಇವರಿಂದ ದಾಖಲೆ ಕೊಡಿ ಎಂದು ಕೇಳುವುದು ಅಮಾನವೀಯ ನಡೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನಲ್ಲಿ ಈ ವರ್ಷ ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕೃಷಿಭೂಮಿ ಮುಳುಗಡೆಯಾಗಿದೆ. ಮತ್ತಷ್ಟು ಮಳೆಯಾಗುತ್ತದೆ ಎಂಬ ವರದಿ ಇದೆ. ಹೀಗಿದ್ದರೂ ತಾಲ್ಲೂಕು ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಎದುರಾಗಬಹುದಾದ ಅವಘಡಗಳನ್ನು ತಪ್ಪಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿಲ್ಲ ಎಂದು ಅವರು ದೂರಿದರು. </p>.<p><strong>ತಾಲ್ಲೂಕಿನಲ್ಲಿ ಡೆಂಗಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗೌತಮಪುರದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ಡೆಂಗಿ ಜ್ವರಕ್ಕೆ ಬಲಿಯಾಗಿದ್ದಾರೆ. ಕಾಯಿಲೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ಜನಪ್ರತಿನಿಧಿಗಳು ನೀಡುವ ಸೂಚನೆ ಜಾರಿಗೆ ಬರುತ್ತಿಲ್ಲ ಎಂದು ಅವರು ಆರೋಪಿಸಿದರು.</strong></p>.<p>ಅತಿವೃಷ್ಟಿಯಿಂದ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಆಡಳಿತ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ನೆಪ ಮಾತ್ರಕ್ಕೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹೋಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ. </p>.<p>ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ. ರತ್ಮಾಕರ ಹೊನಗೋಡು, ಕೆ.ಜಿ.ಪ್ರಶಾಂತ್, ಭರ್ಮಪ್ಪ ಅಂದಾಸುರ, ವಿ.ಮಹೇಶ್, ಗಿರೀಶ್ ಗೌಡ, ಸತೀಶ್ ಕೆ. ಸುವರ್ಣ ಟೀಕಪ್ಪ, ಬಿ.ಟಿ.ರವೀಂದ್ರ, ರಾಯಲ್ ಸಂತೋಷ್, ಜಿ.ಕೆ.ಭೈರಪ್ಪ ಇದ್ದರು.</p>.<p><strong>ರಾಜ್ಯದ ಅಪೆಕ್ಸ್ ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದ ಅವ್ಯವಹಾರ ನಡೆದಿರುವ ಸುಳಿವು ದೊರಕಿದೆ. ಈ ಹಗರಣದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖರು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲೆ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ </strong></p><p><strong>-ಹರತಾಳು ಹಾಲಪ್ಪ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ</strong></p>.<p><strong>ಸ್ಥಳೀಯ ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆ ಇದೆ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಹೀಗಿರುವಾಗ ಕಾಗೋಡು ತಿಮ್ಮಪ್ಪ ಅವರ ಕುಟುಂಬವನ್ನು ಹರತಾಳು ಹಾಲಪ್ಪ ಒಡೆದಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ಸಿಗರು ಆರೋಪಿಸುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ</strong></p><p><strong>- ಡಾ.ರಾಜನಂದಿನಿ ಕಾಗೋಡು ಬಿಜೆಪಿ ನಾಯಕಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಾಲ್ಲೂಕು ಆಡಳಿತ ಕೂಡಲೆ ₹5 ಲಕ್ಷ ಪರಿಹಾರ ವಿತರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಒತ್ತಾಯಿಸಿದ್ದಾರೆ. </p>.<p>ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಗರ ತಾಲ್ಲೂಕಿನಲ್ಲಿ 48, ಹೊಸನಗರ ವ್ಯಾಪ್ತಿಯಲ್ಲಿ 27 ಮನೆಗಳಿಗೆ ಹಾನಿ ಉಂಟಾಗಿದೆ. ತಕ್ಷಣ ಪರಿಹಾರ ಕೊಡುವ ಬದಲು ಅಧಿಕಾರಿಗಳು ನೋವಿನಲ್ಲಿರುವವರ ಮನೆಗೆ ಸಂಬಂಧಪಟ್ಟ ದಾಖಲೆ ಕೇಳುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.</p>.<p>ಮಲೆನಾಡು ಭಾಗದಲ್ಲಿ ಹೆಚ್ಚಿನ ಬಡವರ ಮನೆಗಳಿಗೆ ದಾಖಲೆಗಳು ಇರುವುದಿಲ್ಲ. ಮಳೆ ಹೆಚ್ಚಾದಾಗ ತೊಂದರೆಗೆ ಒಳಗಾಗುವವರು ಈ ವರ್ಗದವರೇ. ಹೀಗಿರುವಾಗ ಇವರಿಂದ ದಾಖಲೆ ಕೊಡಿ ಎಂದು ಕೇಳುವುದು ಅಮಾನವೀಯ ನಡೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನಲ್ಲಿ ಈ ವರ್ಷ ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕೃಷಿಭೂಮಿ ಮುಳುಗಡೆಯಾಗಿದೆ. ಮತ್ತಷ್ಟು ಮಳೆಯಾಗುತ್ತದೆ ಎಂಬ ವರದಿ ಇದೆ. ಹೀಗಿದ್ದರೂ ತಾಲ್ಲೂಕು ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಎದುರಾಗಬಹುದಾದ ಅವಘಡಗಳನ್ನು ತಪ್ಪಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿಲ್ಲ ಎಂದು ಅವರು ದೂರಿದರು. </p>.<p><strong>ತಾಲ್ಲೂಕಿನಲ್ಲಿ ಡೆಂಗಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗೌತಮಪುರದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ಡೆಂಗಿ ಜ್ವರಕ್ಕೆ ಬಲಿಯಾಗಿದ್ದಾರೆ. ಕಾಯಿಲೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ಜನಪ್ರತಿನಿಧಿಗಳು ನೀಡುವ ಸೂಚನೆ ಜಾರಿಗೆ ಬರುತ್ತಿಲ್ಲ ಎಂದು ಅವರು ಆರೋಪಿಸಿದರು.</strong></p>.<p>ಅತಿವೃಷ್ಟಿಯಿಂದ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಆಡಳಿತ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ನೆಪ ಮಾತ್ರಕ್ಕೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹೋಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ. </p>.<p>ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ. ರತ್ಮಾಕರ ಹೊನಗೋಡು, ಕೆ.ಜಿ.ಪ್ರಶಾಂತ್, ಭರ್ಮಪ್ಪ ಅಂದಾಸುರ, ವಿ.ಮಹೇಶ್, ಗಿರೀಶ್ ಗೌಡ, ಸತೀಶ್ ಕೆ. ಸುವರ್ಣ ಟೀಕಪ್ಪ, ಬಿ.ಟಿ.ರವೀಂದ್ರ, ರಾಯಲ್ ಸಂತೋಷ್, ಜಿ.ಕೆ.ಭೈರಪ್ಪ ಇದ್ದರು.</p>.<p><strong>ರಾಜ್ಯದ ಅಪೆಕ್ಸ್ ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದ ಅವ್ಯವಹಾರ ನಡೆದಿರುವ ಸುಳಿವು ದೊರಕಿದೆ. ಈ ಹಗರಣದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖರು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲೆ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ </strong></p><p><strong>-ಹರತಾಳು ಹಾಲಪ್ಪ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ</strong></p>.<p><strong>ಸ್ಥಳೀಯ ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆ ಇದೆ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಹೀಗಿರುವಾಗ ಕಾಗೋಡು ತಿಮ್ಮಪ್ಪ ಅವರ ಕುಟುಂಬವನ್ನು ಹರತಾಳು ಹಾಲಪ್ಪ ಒಡೆದಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ಸಿಗರು ಆರೋಪಿಸುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ</strong></p><p><strong>- ಡಾ.ರಾಜನಂದಿನಿ ಕಾಗೋಡು ಬಿಜೆಪಿ ನಾಯಕಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>