<p><strong>ರಿಪ್ಪನ್ಪೇಟೆ</strong>: ಪಟ್ಟಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪಟ್ಟಣದಲ್ಲಿ ಪ್ರತಿಷ್ಠಾಪಿಸಿರುವ 57 ನೇ ವರ್ಷದ ಗಣಪನ ವಿಸರ್ಜನ ಮೆರವಣಿಗೆ ಮಂಗಳವಾರ ಆರಂಭವಾಯಿತು. <br> ರಾತ್ರಿಯೂ ಮುಂದುವರೆದಿತ್ತು. ನಂತರದಲ್ಲಿ ತೀರ್ಥ ಪ್ರಸಾದ ಅನ್ನಸಂತರ್ಪಣೆ ಜರುಗಿತು.</p>.<p>ಮಧ್ಯಾಹ್ನ 3 ಗಂಟೆಗೆ ಹಿಂದೂ ಸಂಘಟನೆಗಳ ಯುವಕರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದರು. ಸಂಜೆ 5 ಕ್ಕೆ ತಿಲಕ್ ಮಹಾಮಂಟಪದಿಂದ ತೆರೆದ ವಾಹನದಲ್ಲಿ ಶೋಭಾಯಾತ್ರೆ ಹೊರಟಿತು.</p>.<p>ಗಣಪನ ಮೆರವಣಿಗೆ ಸತತ 19 ಗಂಟೆಗಳ ಕಾಲ ನಡೆಯಲಿದ್ದು, ಶಿವಮೊಗ್ಗ -ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ರಸ್ತೆಯ ಮೂಲಕ ಮೆರವಣಿಗೆ ತೆರಳಲಿದೆ. ಗೌವಟೂರಿನ ತಾವರೆಕೆರೆ ಯಲ್ಲಿ ಬುಧವಾರ ಗಣಪತಿ ವಿಸರ್ಜನೆ ನಡೆಯಲಿದೆ.</p>.<p>ಶಿರಸಿಯ ವೀರಭದ್ರಗಲ್ಲಿ ಗೆಳೆಯರ ಬಳಗದ ಕಾಡುಗೊಲ್ಲರ ಕುಣಿತ, ಭದ್ರಾವತಿ ಅರಕೆರೆಯ ವೀರಗಾಸೆ, ಶಿಗ್ಗಾವಿಯ ಜಾಂಜ್ ಪತಾಕ್, ಕೇರಳದ ಗೊಂಬೆ ಕುಣಿತ, ಡೊಳ್ಳು ಕುಣಿತ, ತಟ್ಟಿರಾಯ, ಕೋಲಾಟ, ಭಜನೆ ಸೇರಿದಂತೆ ವಿವಿಧ ಜಾನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ನೀಡಿದವು.<br><br> ಮೆರವಣಿಗೆ ಸಾಗುವ ಮಾರ್ಗವನ್ನು ಉದ್ದಕ್ಕೂ ಸ್ಥಳೀಯರು ತಳಿರು ತೋರಣಗಳಿಂದ ಅಲಂಕರಿಸಿದ್ದರು.<br>ಬಾನಂಗಳದಲ್ಲಿ ರಂಗು ರಂಗಿನ ಸಿಡಿಮದ್ದುಗಳ ಚಿತ್ತಾರ ಭಕ್ತರ ಕಣ್ಮನ ಸೆಳೆದವು. ವಿನಾಯಕ ವೃತ್ತದಲ್ಲಿ ಕ್ರೈಸ್ತ ಹಾಗೂ ಮುಸ್ಲಿಂ ಸಮುದಾಯದವರು ಗಣಪನಿಗೆ ಮಾಲಾರ್ಪಣೆ ಮಾಡಿ ಸಾಮರಸ್ಯ ಮೆರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ಪಟ್ಟಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪಟ್ಟಣದಲ್ಲಿ ಪ್ರತಿಷ್ಠಾಪಿಸಿರುವ 57 ನೇ ವರ್ಷದ ಗಣಪನ ವಿಸರ್ಜನ ಮೆರವಣಿಗೆ ಮಂಗಳವಾರ ಆರಂಭವಾಯಿತು. <br> ರಾತ್ರಿಯೂ ಮುಂದುವರೆದಿತ್ತು. ನಂತರದಲ್ಲಿ ತೀರ್ಥ ಪ್ರಸಾದ ಅನ್ನಸಂತರ್ಪಣೆ ಜರುಗಿತು.</p>.<p>ಮಧ್ಯಾಹ್ನ 3 ಗಂಟೆಗೆ ಹಿಂದೂ ಸಂಘಟನೆಗಳ ಯುವಕರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದರು. ಸಂಜೆ 5 ಕ್ಕೆ ತಿಲಕ್ ಮಹಾಮಂಟಪದಿಂದ ತೆರೆದ ವಾಹನದಲ್ಲಿ ಶೋಭಾಯಾತ್ರೆ ಹೊರಟಿತು.</p>.<p>ಗಣಪನ ಮೆರವಣಿಗೆ ಸತತ 19 ಗಂಟೆಗಳ ಕಾಲ ನಡೆಯಲಿದ್ದು, ಶಿವಮೊಗ್ಗ -ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ರಸ್ತೆಯ ಮೂಲಕ ಮೆರವಣಿಗೆ ತೆರಳಲಿದೆ. ಗೌವಟೂರಿನ ತಾವರೆಕೆರೆ ಯಲ್ಲಿ ಬುಧವಾರ ಗಣಪತಿ ವಿಸರ್ಜನೆ ನಡೆಯಲಿದೆ.</p>.<p>ಶಿರಸಿಯ ವೀರಭದ್ರಗಲ್ಲಿ ಗೆಳೆಯರ ಬಳಗದ ಕಾಡುಗೊಲ್ಲರ ಕುಣಿತ, ಭದ್ರಾವತಿ ಅರಕೆರೆಯ ವೀರಗಾಸೆ, ಶಿಗ್ಗಾವಿಯ ಜಾಂಜ್ ಪತಾಕ್, ಕೇರಳದ ಗೊಂಬೆ ಕುಣಿತ, ಡೊಳ್ಳು ಕುಣಿತ, ತಟ್ಟಿರಾಯ, ಕೋಲಾಟ, ಭಜನೆ ಸೇರಿದಂತೆ ವಿವಿಧ ಜಾನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ನೀಡಿದವು.<br><br> ಮೆರವಣಿಗೆ ಸಾಗುವ ಮಾರ್ಗವನ್ನು ಉದ್ದಕ್ಕೂ ಸ್ಥಳೀಯರು ತಳಿರು ತೋರಣಗಳಿಂದ ಅಲಂಕರಿಸಿದ್ದರು.<br>ಬಾನಂಗಳದಲ್ಲಿ ರಂಗು ರಂಗಿನ ಸಿಡಿಮದ್ದುಗಳ ಚಿತ್ತಾರ ಭಕ್ತರ ಕಣ್ಮನ ಸೆಳೆದವು. ವಿನಾಯಕ ವೃತ್ತದಲ್ಲಿ ಕ್ರೈಸ್ತ ಹಾಗೂ ಮುಸ್ಲಿಂ ಸಮುದಾಯದವರು ಗಣಪನಿಗೆ ಮಾಲಾರ್ಪಣೆ ಮಾಡಿ ಸಾಮರಸ್ಯ ಮೆರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>