<p>ಸಾಗರ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಮೂಲಕ ಆಟೊ ಚಲಾಯಿಸುವ ಆಟೊ ಮಾಲಿಕರು, ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಟೊ ಚಾಲಕರಿಗೆ ವೈಯುಕ್ತಿಕವಾಗಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ನಂತರ ಮಾತನಾಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಆಟೊ ಚಾಲಕರು ಯಾವ ರೀತಿ ತೊಂದರೆಗೆ ಒಳಗಾಗಿದ್ದರೊ ಅದೇ ಪರಿಸ್ಥಿತಿಯನ್ನು ಈಗ ಎದುರಿಸಬೇಕಾಗಿದೆ. ಗ್ಯಾಸ್ ಮೂಲಕ ಆಟೊ ಓಡಿಸುತ್ತಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಆಟೊ ಚಾಲಕರು ಎಂದರೆ ಅವರು ಜನಸಾಮಾನ್ಯರ ಸಾರಥಿಗಳಾಗಿದ್ದು, ನಾಗರಿಕ ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಹಾಗೂ ಅವರ ಕುಟುಂಬದ ಹಿತವನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ ಎಂದರು.</p>.<p>ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಎನ್.ಲಲಿತಮ್ಮ, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೆ.ಹೊಳಿಯಪ್ಪ, ಸೋಮಶೇಖರ್, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ನಾರಾಯಣ ಇದ್ದರು.</p>.<p>ಅಣ್ಣಪ್ಪ ಪ್ರಾರ್ಥಿಸಿದರು. ಚೇತನ್ ರಾಜ್ ಕಣ್ಣೂರು ಸ್ವಾಗತಿಸಿದರು. ಕನ್ನಪ್ಪ ವಂದಿಸಿದರು. ಡಿ.ದಿನೇಶ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-42-1899336284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಮೂಲಕ ಆಟೊ ಚಲಾಯಿಸುವ ಆಟೊ ಮಾಲಿಕರು, ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಟೊ ಚಾಲಕರಿಗೆ ವೈಯುಕ್ತಿಕವಾಗಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ನಂತರ ಮಾತನಾಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಆಟೊ ಚಾಲಕರು ಯಾವ ರೀತಿ ತೊಂದರೆಗೆ ಒಳಗಾಗಿದ್ದರೊ ಅದೇ ಪರಿಸ್ಥಿತಿಯನ್ನು ಈಗ ಎದುರಿಸಬೇಕಾಗಿದೆ. ಗ್ಯಾಸ್ ಮೂಲಕ ಆಟೊ ಓಡಿಸುತ್ತಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಆಟೊ ಚಾಲಕರು ಎಂದರೆ ಅವರು ಜನಸಾಮಾನ್ಯರ ಸಾರಥಿಗಳಾಗಿದ್ದು, ನಾಗರಿಕ ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಹಾಗೂ ಅವರ ಕುಟುಂಬದ ಹಿತವನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ ಎಂದರು.</p>.<p>ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಎನ್.ಲಲಿತಮ್ಮ, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೆ.ಹೊಳಿಯಪ್ಪ, ಸೋಮಶೇಖರ್, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ನಾರಾಯಣ ಇದ್ದರು.</p>.<p>ಅಣ್ಣಪ್ಪ ಪ್ರಾರ್ಥಿಸಿದರು. ಚೇತನ್ ರಾಜ್ ಕಣ್ಣೂರು ಸ್ವಾಗತಿಸಿದರು. ಕನ್ನಪ್ಪ ವಂದಿಸಿದರು. ಡಿ.ದಿನೇಶ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-42-1899336284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>