<p><strong>ಸಾಗರ</strong>: ‘ಎಲ್ಲೇ ಕೆರೆಗಳ ಅಭಿವೃದ್ಧಿ ಕೈಗೊಂಡರೂ ಅದಕ್ಕೆ ಕೈಜೋಡಿಸುವುದು ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ’ ಎಂದು ಕರ್ಣಾಟಕ ಬ್ಯಾಂಕ್ನ ಶಿವಮೊಗ್ಗ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಸಂಜೀವ್ ಕುಮಾರ್ ಕುಲಕರ್ಣಿ ಹೇಳಿದರು.</p>.<p>ತಾಲ್ಲೂಕಿನ ಮಡಸೂರು–ಲಿಂಗದಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಕರ್ಣಾಟಕ ಬ್ಯಾಂಕ್ನಿಂದ ಸೋಮವಾರ ಸಹಾಯಧನ ವಿತರಿಸಿ ಮಾತನಾಡಿದರು.</p>.<p>‘ಕೆರೆಗಳ ಪುನಶ್ಚೇತನದಿಂದ ಆಯಾ ಭಾಗದ ಅಂತರ್ಜಲ ವೃದ್ಧಿಯಾಗುತ್ತದೆ. ಇದರಿಂದ ಕೃಷಿ ಕಾರ್ಯಗಳಿಗೆ ಅನುಕೂಲವಾಗುವ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಸಹಕಾರಿಯಾಗುತ್ತದೆ. ಕುಡಿಯುವ ನೀರಿನ ಬಾವಿಗಳನ್ನು ಕೆರೆಯ ನೀರು ಕಾಯಕಲ್ಪದಂತೆ ಕಾಪಾಡುತ್ತದೆ’ ಎಂದರು.</p>.<p>‘ಮಡಸೂರು–ಲಿಂಗದಹಳ್ಳಿ ಗ್ರಾಮದ ಕೆರೆಯು ಸಾಗರ–ಸೊರಬ ರಸ್ತೆಯ ಪಕ್ಕದಲ್ಲೇ ಇರುವುದರಿಂದ ಪುನಶ್ಚೇತನಗೊಂಡ ಕೆರೆ ಮತ್ತೆ ಮಲಿನಗೊಳ್ಳದಂತೆ ಜಾಗೃತಿ ವಹಿಸಬೇಕಿದೆ. ತ್ಯಾಜ್ಯಗಳನ್ನು ಕೆರೆಗೆ ಸುರಿಯುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದನ್ನು ತಡೆಯುವತ್ತ ಗಮನ ಹರಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಕರ್ಣಾಟಕ ಬ್ಯಾಂಕ್ನ ಸಿಎಸ್ಆರ್ ನಿಧಿಯಿಂದ ಲಿಂಗದಹಳ್ಳಿ ಕೆರೆ ಅಭಿವೃದ್ಧಿಗೆ ₹ 15 ಲಕ್ಷ ಮಂಜೂರಾಗಿದ್ದು, ಈಗಾಗಲೇ ₹ 10 ಲಕ್ಷ ಪಾವತಿಸಲಾಗಿದೆ. ಕೊನೆಯ ಕಂತಿನಲ್ಲಿ ₹ 5 ಲಕ್ಷ ನೀಡಲಾಗಿದೆ. ಈ ಹಣವನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಂಡಿರುವುದು ಸಂತಸ ತಂದಿದೆ’ ಎಂದರು.</p>.<p>ಗ್ರಾಮಸ್ಥರ ಪರವಾಗಿ ಶ್ರೀ ರಾಮ ಮೆಮೋರಿಯಲ್ ಫೌಂಡೇಷನ್ನ ಮ್ಯಾನೇಜಿಂಗ್ ಟ್ರಸ್ಟಿ ಎಲ್. ಸುಬ್ರಾಯ ನೆರವಿನ ಹಣ ಸ್ವೀಕರಿಸಿದರು. ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ರಾಮಮೂರ್ತಿ, ಪ್ರಮುಖರಾದ ಎಲ್.ಕೆ. ದೇವಪ್ಪ, ಲಕ್ಷ್ಮಿನಾರಾಯಣ, ವೆಂಕಟೇಶ್ ರಾವ್, ವೆಂಕಟೇಶ್ ಎಲ್.ಆರ್., ಶಮಂತ, ವಿನುತಾ, ಸಾವಿತ್ರಿ, ನೇತ್ರಾವತಮ್ಮಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-37714464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ಎಲ್ಲೇ ಕೆರೆಗಳ ಅಭಿವೃದ್ಧಿ ಕೈಗೊಂಡರೂ ಅದಕ್ಕೆ ಕೈಜೋಡಿಸುವುದು ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ’ ಎಂದು ಕರ್ಣಾಟಕ ಬ್ಯಾಂಕ್ನ ಶಿವಮೊಗ್ಗ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಸಂಜೀವ್ ಕುಮಾರ್ ಕುಲಕರ್ಣಿ ಹೇಳಿದರು.</p>.<p>ತಾಲ್ಲೂಕಿನ ಮಡಸೂರು–ಲಿಂಗದಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಕರ್ಣಾಟಕ ಬ್ಯಾಂಕ್ನಿಂದ ಸೋಮವಾರ ಸಹಾಯಧನ ವಿತರಿಸಿ ಮಾತನಾಡಿದರು.</p>.<p>‘ಕೆರೆಗಳ ಪುನಶ್ಚೇತನದಿಂದ ಆಯಾ ಭಾಗದ ಅಂತರ್ಜಲ ವೃದ್ಧಿಯಾಗುತ್ತದೆ. ಇದರಿಂದ ಕೃಷಿ ಕಾರ್ಯಗಳಿಗೆ ಅನುಕೂಲವಾಗುವ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಸಹಕಾರಿಯಾಗುತ್ತದೆ. ಕುಡಿಯುವ ನೀರಿನ ಬಾವಿಗಳನ್ನು ಕೆರೆಯ ನೀರು ಕಾಯಕಲ್ಪದಂತೆ ಕಾಪಾಡುತ್ತದೆ’ ಎಂದರು.</p>.<p>‘ಮಡಸೂರು–ಲಿಂಗದಹಳ್ಳಿ ಗ್ರಾಮದ ಕೆರೆಯು ಸಾಗರ–ಸೊರಬ ರಸ್ತೆಯ ಪಕ್ಕದಲ್ಲೇ ಇರುವುದರಿಂದ ಪುನಶ್ಚೇತನಗೊಂಡ ಕೆರೆ ಮತ್ತೆ ಮಲಿನಗೊಳ್ಳದಂತೆ ಜಾಗೃತಿ ವಹಿಸಬೇಕಿದೆ. ತ್ಯಾಜ್ಯಗಳನ್ನು ಕೆರೆಗೆ ಸುರಿಯುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದನ್ನು ತಡೆಯುವತ್ತ ಗಮನ ಹರಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಕರ್ಣಾಟಕ ಬ್ಯಾಂಕ್ನ ಸಿಎಸ್ಆರ್ ನಿಧಿಯಿಂದ ಲಿಂಗದಹಳ್ಳಿ ಕೆರೆ ಅಭಿವೃದ್ಧಿಗೆ ₹ 15 ಲಕ್ಷ ಮಂಜೂರಾಗಿದ್ದು, ಈಗಾಗಲೇ ₹ 10 ಲಕ್ಷ ಪಾವತಿಸಲಾಗಿದೆ. ಕೊನೆಯ ಕಂತಿನಲ್ಲಿ ₹ 5 ಲಕ್ಷ ನೀಡಲಾಗಿದೆ. ಈ ಹಣವನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಂಡಿರುವುದು ಸಂತಸ ತಂದಿದೆ’ ಎಂದರು.</p>.<p>ಗ್ರಾಮಸ್ಥರ ಪರವಾಗಿ ಶ್ರೀ ರಾಮ ಮೆಮೋರಿಯಲ್ ಫೌಂಡೇಷನ್ನ ಮ್ಯಾನೇಜಿಂಗ್ ಟ್ರಸ್ಟಿ ಎಲ್. ಸುಬ್ರಾಯ ನೆರವಿನ ಹಣ ಸ್ವೀಕರಿಸಿದರು. ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ರಾಮಮೂರ್ತಿ, ಪ್ರಮುಖರಾದ ಎಲ್.ಕೆ. ದೇವಪ್ಪ, ಲಕ್ಷ್ಮಿನಾರಾಯಣ, ವೆಂಕಟೇಶ್ ರಾವ್, ವೆಂಕಟೇಶ್ ಎಲ್.ಆರ್., ಶಮಂತ, ವಿನುತಾ, ಸಾವಿತ್ರಿ, ನೇತ್ರಾವತಮ್ಮಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-37714464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>