<p><strong>ಶಿವಮೊಗ್ಗ:</strong> ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಒಂದೇ ದಿನದಲ್ಲಿ ಐದು ಮೊಬೈಲ್ ಬೇರಿಂಗ್ ಪಾರ್ಶಿಯಲ್ ನೀ ರಿಪ್ಲೇಸ್ಮೆಂಟ್ ಸರ್ಜರಿ (ಒಳ ಭಾಗದ ಅರ್ಧ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆ) ಯಶಸ್ವಿಯಾಗಿ ನೆರವೇರಿಸಿದ್ದಾರೆ.</p>.<p>ಎಲುಬು, ಕೀಲು ಶಸ್ತ್ರಚಿಕಿತ್ಸಕ ಡಾ.ಎಂ.ಬಿ ಅಭಿಷೇಕ್ ನೇತೃತ್ವದ ತಜ್ಞರ ತಂಡ, ಮತ್ತು ಅನಸ್ತೇಶಿಯಾ ತಜ್ಞ ಡಾ. ಅಜಿತ್ ಶೆಟ್ಟಿ ಹಾಗೂ ಡಾ. ಚಕ್ರವರ್ತಿ ಸೊಂಡೂರು ಸಹಯೋಗದಲ್ಲಿ ಯಶಸ್ವಿಯಾಗಿ ಈ ಚಿಕಿತ್ಸೆ ನೆರವೇರಿಸಲಾಗಿದೆ.</p>.<p>50ರಿಂದ 75 ವರ್ಷ ವಯೋಮಿತಿಯಲ್ಲಿರುವ ಐದು ರೋಗಿಗಳು ಈ ಶಸ್ತ್ರಚಿಕಿತ್ಸೆಗೊಳಗಾಗಿದೆ. ಚಿಕಿತ್ಸೆಯ ನಂತರ ಯಾವುದೇ ನೋವು ಇಲ್ಲದೆ ದೈನಂದಿನ ಚಟುವಟಿಕೆಗಳನ್ನು ಪುನಃ ಪ್ರಾರಂಭಿಸಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ಡಾ. ಅಭಿಷೇಕ್ ಎಂ.ಬಿ., ‘ಈ ಶಸ್ತ್ರ ಚಿಕಿತ್ಸೆ ದೇಹದಲ್ಲಿ ಯಾವುದೇ ದೊಡ್ಡ ಛೇಧನವಿಲ್ಲದೇ ನೇರವೇರಿಸಬಹುದಾದ ಶಸ್ತ್ರ ಚಿಕಿತ್ಸೆಯಾಗಿದೆ. ಇದು ಮೊಣಕಾಲಿನ ಒಳಭಾಗದ (ಮೀಡಿಯಲ್ ಕಂಪಾರ್ಟ್ಮೆಂಟ್) ಅಸ್ಥಿ ಸಂಧಿವಾತದಿಂದ ಬಳಲುವವರಿಗೆ ಉಪಯುಕ್ತ’ ಎಂದು ಹೇಳಿದರು.</p>.<p>ಈ ಎಲ್ಲಾ ರೋಗಿಗಳು ಸಂಧಿವಾತದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ ಅಭಿಷೇಕ್. ‘ಈ ಚಿಕಿತ್ಸೆಯಲ್ಲಿ, ಸ್ಥಿರ ಪ್ಲಾಸ್ಟಿಕ್ ಬೇರಿಂಗ್ ಮತ್ತು ಮೊಬೈಲ್ ಪ್ಲಾಸ್ಟಿಕ್ ಬೇರಿಂಗ್ ಎಂಬ ಎರಡು ಪ್ರಕಾರಗಳಿವೆ. ಮೊಬೈಲ್ ಬೇರಿಂಗ್ ಪ್ರಕಾರ ದೀರ್ಘಕಾಲದ ಬಾಳಿಕೆ ಹೊಂದಿದೆ. ಈ ಚಿಕಿತ್ಸೆಗೆ ಒಳಪಟ್ಟ ರೋಗಿಯು ಶೀಘ್ರ ಗುಣಮುಖನಾಗುವುದಲ್ಲದೆ, ರೋಗಿಯು ಯಾವುದೇ ತೊಂದರೆ ಇಲ್ಲದೆ ತನ್ನ ದೈನಂದಿನ ಕಾರ್ಯಗಳ ಮಾಡಬಹುದಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಒಂದೇ ದಿನದಲ್ಲಿ ಐದು ಮೊಬೈಲ್ ಬೇರಿಂಗ್ ಪಾರ್ಶಿಯಲ್ ನೀ ರಿಪ್ಲೇಸ್ಮೆಂಟ್ ಸರ್ಜರಿ (ಒಳ ಭಾಗದ ಅರ್ಧ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆ) ಯಶಸ್ವಿಯಾಗಿ ನೆರವೇರಿಸಿದ್ದಾರೆ.</p>.<p>ಎಲುಬು, ಕೀಲು ಶಸ್ತ್ರಚಿಕಿತ್ಸಕ ಡಾ.ಎಂ.ಬಿ ಅಭಿಷೇಕ್ ನೇತೃತ್ವದ ತಜ್ಞರ ತಂಡ, ಮತ್ತು ಅನಸ್ತೇಶಿಯಾ ತಜ್ಞ ಡಾ. ಅಜಿತ್ ಶೆಟ್ಟಿ ಹಾಗೂ ಡಾ. ಚಕ್ರವರ್ತಿ ಸೊಂಡೂರು ಸಹಯೋಗದಲ್ಲಿ ಯಶಸ್ವಿಯಾಗಿ ಈ ಚಿಕಿತ್ಸೆ ನೆರವೇರಿಸಲಾಗಿದೆ.</p>.<p>50ರಿಂದ 75 ವರ್ಷ ವಯೋಮಿತಿಯಲ್ಲಿರುವ ಐದು ರೋಗಿಗಳು ಈ ಶಸ್ತ್ರಚಿಕಿತ್ಸೆಗೊಳಗಾಗಿದೆ. ಚಿಕಿತ್ಸೆಯ ನಂತರ ಯಾವುದೇ ನೋವು ಇಲ್ಲದೆ ದೈನಂದಿನ ಚಟುವಟಿಕೆಗಳನ್ನು ಪುನಃ ಪ್ರಾರಂಭಿಸಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ಡಾ. ಅಭಿಷೇಕ್ ಎಂ.ಬಿ., ‘ಈ ಶಸ್ತ್ರ ಚಿಕಿತ್ಸೆ ದೇಹದಲ್ಲಿ ಯಾವುದೇ ದೊಡ್ಡ ಛೇಧನವಿಲ್ಲದೇ ನೇರವೇರಿಸಬಹುದಾದ ಶಸ್ತ್ರ ಚಿಕಿತ್ಸೆಯಾಗಿದೆ. ಇದು ಮೊಣಕಾಲಿನ ಒಳಭಾಗದ (ಮೀಡಿಯಲ್ ಕಂಪಾರ್ಟ್ಮೆಂಟ್) ಅಸ್ಥಿ ಸಂಧಿವಾತದಿಂದ ಬಳಲುವವರಿಗೆ ಉಪಯುಕ್ತ’ ಎಂದು ಹೇಳಿದರು.</p>.<p>ಈ ಎಲ್ಲಾ ರೋಗಿಗಳು ಸಂಧಿವಾತದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ ಅಭಿಷೇಕ್. ‘ಈ ಚಿಕಿತ್ಸೆಯಲ್ಲಿ, ಸ್ಥಿರ ಪ್ಲಾಸ್ಟಿಕ್ ಬೇರಿಂಗ್ ಮತ್ತು ಮೊಬೈಲ್ ಪ್ಲಾಸ್ಟಿಕ್ ಬೇರಿಂಗ್ ಎಂಬ ಎರಡು ಪ್ರಕಾರಗಳಿವೆ. ಮೊಬೈಲ್ ಬೇರಿಂಗ್ ಪ್ರಕಾರ ದೀರ್ಘಕಾಲದ ಬಾಳಿಕೆ ಹೊಂದಿದೆ. ಈ ಚಿಕಿತ್ಸೆಗೆ ಒಳಪಟ್ಟ ರೋಗಿಯು ಶೀಘ್ರ ಗುಣಮುಖನಾಗುವುದಲ್ಲದೆ, ರೋಗಿಯು ಯಾವುದೇ ತೊಂದರೆ ಇಲ್ಲದೆ ತನ್ನ ದೈನಂದಿನ ಕಾರ್ಯಗಳ ಮಾಡಬಹುದಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>