<p><strong>ಶಿವಮೊಗ್ಗ:</strong> ವಿನೋಬನಗರದ ಶುಭಮಂಗಳ ಸಮುದಾಯ ಭವನದ ಪಕ್ಕದಲ್ಲಿರುವ ಶನೈಶ್ಚರ ಸ್ವಾಮಿ ದೇವಾಲಯದ 11ನೇ ವರ್ಷದ ಮಹಾರಥೋತ್ಸವ ಮೇ 16ರಂದು ಬೆಳಿಗ್ಗೆ 11-55ಕ್ಕೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ನ.ಮೂರ್ತಿ ತಿಳಿಸಿದರು.</p>.<p>‘ಸಮಿತಿಯ ಅಧ್ಯಕ್ಷರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾರ್ಗದರ್ಶನದಲ್ಲಿ ನಡೆಯುವ ರಥೋತ್ಸವದ ಅಂಗವಾಗಿ ಮೇ 15ರಂದು ಬೆಳಿಗ್ಗೆ ಕುಲದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಗಣಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಮೇ 14ರಂದು ಬೆಳಿಗ್ಗೆ 8 ಗಂಟೆಗೆ ವಿಶೇಷ ಪೂಜೆಗಳು ಜರುಗಲಿವೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಮಹಾರಥೋತ್ಸವಕ್ಕೆ ಸಂಕಲ್ಪ ಸೇವೆ ಸಲ್ಲಿಸುವವರು ₹ 101 ಪಾವತಿಸಿ ರಸೀದಿ ಪಡೆಯಬೇಕು’ ಎಂದು ಟ್ರಸ್ಟ್ ಉಪಾಧ್ಯಕ್ಷ ವಿ.ರಾಜು ತಿಳಿಸಿದರು.</p>.<p>‘ಮೇ 17ರಂದು ಪ್ರಭೋದೋತ್ಸವ 108 ಕಲಶ ಸ್ಥಾಪನೆ, ಕುಂಭಾಭಿಷೇಕ, ಹೋಮ, ಮಹಾಪೂಜೆ, ತೀರ್ಥಪ್ರಸಾದ ನಂತರ ಅನ್ನ ಸಂತರ್ಪಣೆ ನಡೆಯಲಿದೆ’ ಎಂದರು.</p>.<p>ಟ್ರಸ್ಟ್ ಪದಾಧಿಕಾರಿಗಳಾದ ಎಂ.ಪ್ರಭಾಕರ್, ಎಸ್.ಎನ್.ವೆಂಕಟೇಶ್, ಎಚ್.ಚಂದ್ರಶೇಖರ್, ಬಿ.ಡಿ.ರಮೇಶ್, ಎಸ್.ಎಚ್.ಸಂತೋಷ್, ಎಸ್.ವಿ. ಶ್ರೀನಿವಾಸ ರಾವ್, ಸ.ನ.ಚಂದ್ರಶೇಖರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-42-1297635787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ವಿನೋಬನಗರದ ಶುಭಮಂಗಳ ಸಮುದಾಯ ಭವನದ ಪಕ್ಕದಲ್ಲಿರುವ ಶನೈಶ್ಚರ ಸ್ವಾಮಿ ದೇವಾಲಯದ 11ನೇ ವರ್ಷದ ಮಹಾರಥೋತ್ಸವ ಮೇ 16ರಂದು ಬೆಳಿಗ್ಗೆ 11-55ಕ್ಕೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ನ.ಮೂರ್ತಿ ತಿಳಿಸಿದರು.</p>.<p>‘ಸಮಿತಿಯ ಅಧ್ಯಕ್ಷರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾರ್ಗದರ್ಶನದಲ್ಲಿ ನಡೆಯುವ ರಥೋತ್ಸವದ ಅಂಗವಾಗಿ ಮೇ 15ರಂದು ಬೆಳಿಗ್ಗೆ ಕುಲದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಗಣಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಮೇ 14ರಂದು ಬೆಳಿಗ್ಗೆ 8 ಗಂಟೆಗೆ ವಿಶೇಷ ಪೂಜೆಗಳು ಜರುಗಲಿವೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಮಹಾರಥೋತ್ಸವಕ್ಕೆ ಸಂಕಲ್ಪ ಸೇವೆ ಸಲ್ಲಿಸುವವರು ₹ 101 ಪಾವತಿಸಿ ರಸೀದಿ ಪಡೆಯಬೇಕು’ ಎಂದು ಟ್ರಸ್ಟ್ ಉಪಾಧ್ಯಕ್ಷ ವಿ.ರಾಜು ತಿಳಿಸಿದರು.</p>.<p>‘ಮೇ 17ರಂದು ಪ್ರಭೋದೋತ್ಸವ 108 ಕಲಶ ಸ್ಥಾಪನೆ, ಕುಂಭಾಭಿಷೇಕ, ಹೋಮ, ಮಹಾಪೂಜೆ, ತೀರ್ಥಪ್ರಸಾದ ನಂತರ ಅನ್ನ ಸಂತರ್ಪಣೆ ನಡೆಯಲಿದೆ’ ಎಂದರು.</p>.<p>ಟ್ರಸ್ಟ್ ಪದಾಧಿಕಾರಿಗಳಾದ ಎಂ.ಪ್ರಭಾಕರ್, ಎಸ್.ಎನ್.ವೆಂಕಟೇಶ್, ಎಚ್.ಚಂದ್ರಶೇಖರ್, ಬಿ.ಡಿ.ರಮೇಶ್, ಎಸ್.ಎಚ್.ಸಂತೋಷ್, ಎಸ್.ವಿ. ಶ್ರೀನಿವಾಸ ರಾವ್, ಸ.ನ.ಚಂದ್ರಶೇಖರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-42-1297635787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>