ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ಅಂತಿಮ: ಸಿಎಂ ಬೊಮ್ಮಾಯಿ

ಶಿವಮೊಗ್ಗ: ‘ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮಗೊಳಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಮಾನ ನಿಲ್ದಾಣ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಗಲಭೆ ತಡೆಯಲು ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು: ಯಡಿಯೂರಪ್ಪ
‘ವಿಮಾನ ನಿಲ್ದಾಣ ₹ 386 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಹಲವರ ಹೆಸರು ನಾಮಕರಣ ಮಾಡಲು ಪ್ರಸ್ತಾವ ಬಂದಿದ್ದವು. ನಿಲ್ದಾಣ ನಿರ್ಮಾಣಕ್ಕೆ ಯಡಿಯೂರಪ್ಪ ಅವರು ಶ್ರಮಿಸಿದ್ದಾರೆ. ಹಾಗಾಗಿ, ಅವರ ಹೆಸರು ಅಂತಿಮಗೊಳಿಸಲಾಗಿದೆ. ಸಂಪುಟ ಅನುಮೋದನೆ ನೀಡಿದೆ. ಕೇಂದ್ರದಿಂದಲೂ ಒಪ್ಪಿಗೆ ಸಿಗಲಿದೆ. ರನ್ವೇ ಕಾಮಗಾರಿ, ರಾತ್ರಿ ಸಮಯದಲ್ಲೂ ವಿಮಾನ ಇಳಿಯಲು ಸೌಕರ್ಯ ಸೇರಿ ಹಲವು ಕೆಲಸಗಳಿಗೆ ₹60 ಕೋಟಿಯ ಅಗತ್ಯವಿದೆ. ಬಾಕಿ ಹಣ ತಕ್ಷಣ ಬಿಡುಗಡೆ ಮಾಡಲಾಗುವುದು. ಈ ವರ್ಷದ ಅಂತ್ಯದ ಒಳಗೆ ನಿಲ್ದಾಣ ಉದ್ಘಾಟನೆಯಾಗಲಿದೆ’ ಎಂದು ವಿವರ ನೀಡಿದರು.
ಶಾಂತಿ ಕದಡುವ ಕೆಲಸ ದುರದೃಷ್ಟಕರ: ಹುಬ್ಬಳ್ಳಿ ಘಟನೆ ಬಗ್ಗೆ ಬಿಎಸ್ವೈ ಪ್ರತಿಕ್ರಿಯೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.