<p>ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿಯ ಬಸ್ತಿಕೊಪ್ಪದ ಗಣಪತಿನಾಯ್ಕ ಆ್ಯಂಡ್ ಕಂಪನಿಗೆ ಸೇರಿದ್ದ ಕಲ್ಲು ಗಣಿಗಾರಿಕೆಯ ಸ್ಥಳದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ತಪಾಸಣೆ ನಡೆಸಿ 100ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ವಶಪಡಿಸಿಕೊಂಡಿದೆ.</p>.<p>ಮೂರು ಹಂತಗಳಲ್ಲಿ ಜಿಲೆಟಿನ್ ಹಾಗೂ ಅಮೋನಿಯಂ ನೈಟ್ರೇಟ್ ಸ್ಫೋಟಿಸಿರುವ ಬಾಂಬ್ ನಿಷ್ಕ್ರಿಯ ದಳ ಇನ್ನುಳಿದ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದೆ. ಸ್ಫೋಟಕ ಪತ್ತೆಯಾದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.</p>.<p>ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಖಂಡನೆ: ಬಸ್ತಿಕೊಪ್ಪ, ಚಂದ್ರಗುತ್ತಿ ಸೇರಿ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಜೀವಕ್ಕೆ ಇದು ಮಾರಕವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ಜನರ ಜೀವ ರಕ್ಷಣೆಗೆ ಮುಂದಾಗಬೇಕು. ಸ್ಫೋಟ ನಡೆಸುತ್ತಿರುವುದರಿಂದ ಕೊಳವೆಬಾವಿಗಳಿಗೂ ಹಾನಿಯಾಗುತ್ತಿದ್ದು, ಕುಡಿಯುವ ನೀರು ಕಲುಷಿತಗೊಳ್ಳುವ ಅಪಾಯ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-42-488257550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿಯ ಬಸ್ತಿಕೊಪ್ಪದ ಗಣಪತಿನಾಯ್ಕ ಆ್ಯಂಡ್ ಕಂಪನಿಗೆ ಸೇರಿದ್ದ ಕಲ್ಲು ಗಣಿಗಾರಿಕೆಯ ಸ್ಥಳದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ತಪಾಸಣೆ ನಡೆಸಿ 100ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ವಶಪಡಿಸಿಕೊಂಡಿದೆ.</p>.<p>ಮೂರು ಹಂತಗಳಲ್ಲಿ ಜಿಲೆಟಿನ್ ಹಾಗೂ ಅಮೋನಿಯಂ ನೈಟ್ರೇಟ್ ಸ್ಫೋಟಿಸಿರುವ ಬಾಂಬ್ ನಿಷ್ಕ್ರಿಯ ದಳ ಇನ್ನುಳಿದ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದೆ. ಸ್ಫೋಟಕ ಪತ್ತೆಯಾದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.</p>.<p>ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಖಂಡನೆ: ಬಸ್ತಿಕೊಪ್ಪ, ಚಂದ್ರಗುತ್ತಿ ಸೇರಿ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಜೀವಕ್ಕೆ ಇದು ಮಾರಕವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ಜನರ ಜೀವ ರಕ್ಷಣೆಗೆ ಮುಂದಾಗಬೇಕು. ಸ್ಫೋಟ ನಡೆಸುತ್ತಿರುವುದರಿಂದ ಕೊಳವೆಬಾವಿಗಳಿಗೂ ಹಾನಿಯಾಗುತ್ತಿದ್ದು, ಕುಡಿಯುವ ನೀರು ಕಲುಷಿತಗೊಳ್ಳುವ ಅಪಾಯ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-42-488257550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>