<p><strong>ಶಿವಮೊಗ್ಗ</strong>: ಮಧುಮೇಹಿಗಳ ಸಂಖ್ಯೆ ಹೆಚ್ಚಲು ಜನರು ಅನುಸರಿಸುತ್ತಿರುವ ಜೀವನ ಶೈಲಿಯೇ ಮುಖ್ಯ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಹೇಳಿದರು.</p>.<p>ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಭಾನುವಾರ ಶಿವಮೊಗ್ಗ ಮಿಡ್ಟೌನ್ ರೋಟರಿ ಡಯಾಬಿಟಿಸ್ ಸೆಲ್ಫ್ ಕೇರ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ನಡಿಗೆ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಮಧುಮೇಹ ತಡೆಗಟ್ಟಬಹುದು. ಮಧುಮೇಹ ಕಾಯಿಲೆಗೆ ಸಂಬಂಧಿಸಿ ವೈದ್ಯರಿಂದ ಮಾರ್ಗದರ್ಶನ ಪಡೆದು ಔಷಧಗಳನ್ನು ತೆಗೆದುಕೊಳ್ಳಬೇಕು. ವೈದ್ಯರ ಮಾರ್ಗದರ್ಶನದಂತೆ ಜೀವನ ಶೈಲಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ರಕ್ತನಿಧಿ ಕೇಂದ್ರದಿಂದ ನೆಹರೂ ಕ್ರೀಡಾಂಗಣದವರೆಗೆ ಜಾಗೃತಿ ಜಾಥಾ ನಡೆಸಲಾಯಿತು.</p>.<p>ರೋಟರಿ ಮಿಡ್ಟೌನ್ ಅಧ್ಯಕ್ಷ ಡಿ.ಎಸ್. ಅರುಣ್, ರಾಜೇಂದ್ರ ಪ್ರಸಾದ್, ಹರ್ಷಕಾಮತ್, ಡಾ.ಶಿವರಾಮಕೃಷ್ಣ, ಜಿ.ಎನ್.ಎನ್. ಮೂರ್ತಿ, ಅನಿಲ್, ಜಿ. ವಿಜಯ್ಕುಮಾರ್ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಮಧುಮೇಹಿಗಳ ಸಂಖ್ಯೆ ಹೆಚ್ಚಲು ಜನರು ಅನುಸರಿಸುತ್ತಿರುವ ಜೀವನ ಶೈಲಿಯೇ ಮುಖ್ಯ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಹೇಳಿದರು.</p>.<p>ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಭಾನುವಾರ ಶಿವಮೊಗ್ಗ ಮಿಡ್ಟೌನ್ ರೋಟರಿ ಡಯಾಬಿಟಿಸ್ ಸೆಲ್ಫ್ ಕೇರ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ನಡಿಗೆ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಮಧುಮೇಹ ತಡೆಗಟ್ಟಬಹುದು. ಮಧುಮೇಹ ಕಾಯಿಲೆಗೆ ಸಂಬಂಧಿಸಿ ವೈದ್ಯರಿಂದ ಮಾರ್ಗದರ್ಶನ ಪಡೆದು ಔಷಧಗಳನ್ನು ತೆಗೆದುಕೊಳ್ಳಬೇಕು. ವೈದ್ಯರ ಮಾರ್ಗದರ್ಶನದಂತೆ ಜೀವನ ಶೈಲಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ರಕ್ತನಿಧಿ ಕೇಂದ್ರದಿಂದ ನೆಹರೂ ಕ್ರೀಡಾಂಗಣದವರೆಗೆ ಜಾಗೃತಿ ಜಾಥಾ ನಡೆಸಲಾಯಿತು.</p>.<p>ರೋಟರಿ ಮಿಡ್ಟೌನ್ ಅಧ್ಯಕ್ಷ ಡಿ.ಎಸ್. ಅರುಣ್, ರಾಜೇಂದ್ರ ಪ್ರಸಾದ್, ಹರ್ಷಕಾಮತ್, ಡಾ.ಶಿವರಾಮಕೃಷ್ಣ, ಜಿ.ಎನ್.ಎನ್. ಮೂರ್ತಿ, ಅನಿಲ್, ಜಿ. ವಿಜಯ್ಕುಮಾರ್ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>