<p>ತ್ಯಾಗರ್ತಿ: ‘ವಾಹನ ಸವಾರರಿಗೆ ಅನುಕೂಲವಾಗುವಂತೆ ಸುಸಜ್ಜಿತ ಸರ್ಕಲ್ ನಿರ್ಮಾಣ ಮಾಡುವುದರ ಜೊತೆಗೆ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗುವುದು. ಸುಸಜ್ಜಿತ ಬಸ್ ನಿಲ್ದಾಣವನ್ನೂ ನಿರ್ಮಿಸಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೇಹಳ್ಳಿ ಸರ್ಕಲ್ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು.</p>.<p>‘ಎಡೇಹಳ್ಳಿಯಿಂದ ರಿಪ್ಪನ್ಪೇಟೆ ಸರ್ಕಲ್ವರೆಗೆ ಒಟ್ಟು ₹ 27.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಗಾಣಿಗರ ಕೆರೆ ಬಳಿ ನಡಿಗೆ ಪಥ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಈಗಾಗಲೇ ಮಂಜೂರಾಗಿದ್ದು, ನೀರಿನ ಮಟ್ಟ ಸ್ವಲ್ಪ ಇಳಿದ ನಂತರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಪ್ರಾರಂಭಿಸಲಾಗುವುದು. ತಾಲ್ಲೂಕಿನ ಪ್ರತಿ ಹೋಬಳಿ ಮಟ್ಟದಲ್ಲಿ ಫುಡ್ಕೋರ್ಟ್ ಮತ್ತು ನಂದಿನಿ ಪಾರ್ಲರ್ಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ’ ಎಂದರು.</p>.<p>‘ಆನಂದಪುರ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ₹ 60 ಲಕ್ಷ ಅನುದಾನ ಮಂಜೂರು ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ವಿರೋಧ ಪಕ್ಷದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದರು. ಪಕ್ಷದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-42-644445306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ಯಾಗರ್ತಿ: ‘ವಾಹನ ಸವಾರರಿಗೆ ಅನುಕೂಲವಾಗುವಂತೆ ಸುಸಜ್ಜಿತ ಸರ್ಕಲ್ ನಿರ್ಮಾಣ ಮಾಡುವುದರ ಜೊತೆಗೆ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗುವುದು. ಸುಸಜ್ಜಿತ ಬಸ್ ನಿಲ್ದಾಣವನ್ನೂ ನಿರ್ಮಿಸಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೇಹಳ್ಳಿ ಸರ್ಕಲ್ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು.</p>.<p>‘ಎಡೇಹಳ್ಳಿಯಿಂದ ರಿಪ್ಪನ್ಪೇಟೆ ಸರ್ಕಲ್ವರೆಗೆ ಒಟ್ಟು ₹ 27.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಗಾಣಿಗರ ಕೆರೆ ಬಳಿ ನಡಿಗೆ ಪಥ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಈಗಾಗಲೇ ಮಂಜೂರಾಗಿದ್ದು, ನೀರಿನ ಮಟ್ಟ ಸ್ವಲ್ಪ ಇಳಿದ ನಂತರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಪ್ರಾರಂಭಿಸಲಾಗುವುದು. ತಾಲ್ಲೂಕಿನ ಪ್ರತಿ ಹೋಬಳಿ ಮಟ್ಟದಲ್ಲಿ ಫುಡ್ಕೋರ್ಟ್ ಮತ್ತು ನಂದಿನಿ ಪಾರ್ಲರ್ಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ’ ಎಂದರು.</p>.<p>‘ಆನಂದಪುರ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ₹ 60 ಲಕ್ಷ ಅನುದಾನ ಮಂಜೂರು ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ವಿರೋಧ ಪಕ್ಷದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದರು. ಪಕ್ಷದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-42-644445306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>