<p>ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಗೆ ಸಿಲುಕಿ ಮೃತಪಟ್ಟ ಬೆನ್ನಲ್ಲೇ ಶನಿವಾರ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗನಾಥ ಹಾಡ್ಯ ಧಾಮಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.</p>.<p>‘ಇದೊಂದು ದುರ್ಘಟನೆ. ಮೃತರ ಕುಟುಂಬದ ದುಃಖ ಭರಿಸಲು ಸಾಧ್ಯವಾಗುವುದಿಲ್ಲ. ನಮ್ಮ ಮೃಗಾಲಯದ ವೈದ್ಯೆ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಉಂಟಾಗಿದ್ದು ದುಃಖ ತಂದಿದೆ’ ಎಂದು ಅವರು ಈ ಸಂದರ್ಭ ಬೇಸರ ವ್ಯಕ್ತಪಡಿಸಿದರು.</p>.<p>‘ಘಟನೆ ಕುರಿತು ಪೊಲೀಸ್ ಹಾಗೂ ಅರಣ್ಯ ಇಲಾಖೆ ತನಿಖೆ ಆರಂಭಿಸಿವೆ. ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಡಾ. ಸಮೀಕ್ಷಾ ರೆಡ್ಡಿ ಮೃಗಾಲಯದಲ್ಲಿರುವ ಪ್ರಾಣಿಗಳ ಬಗ್ಗೆ ಅತಿಯಾದ ಪ್ರೀತಿ ಹೊಂದಿದ್ದರು. ಆ ಪ್ರೀತಿಯೇ ಅವರ ಪ್ರಾಣಕ್ಕೆ ಕುಂದು ತಂದಿರುವುದು ನೋವು ತಂದಿದೆ. ತಪ್ಪಿತಸ್ಥರು ಯಾರೇ ಆದರೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>ಇಬ್ಬರು ಸಿಬ್ಬಂದಿಯೊಂದಿಗೆ ಬಂದಿದ್ದ ಸಮೀಕ್ಷಾ ರೆಡ್ಡಿ ನೀರಾನೆಯ ಚಿಕಿತ್ಸೆಗೆ ಮುಂದಾಗಿದ್ದರು. ಅವರು ನೀರಾನೆ ಬಳಿ ಹೋದಾಗ, ಗರ್ಭಿಣಿ ನೀರಾನೆ ಹಂಸಿಣಿ ಸಿಟ್ಟಿಗೆದ್ದಿದೆ. ಹೆರಿಗೆ ದಿನ ಹತ್ತಿರಕ್ಕೆ ಬಂದಾಗ ಅದು ಊಟ ತಿಂಡಿ ಬಿಟ್ಟಿರುತ್ತದೆ. ಈ ವೇಳೆ ಸಮೀಕ್ಷಾ ರೆಡ್ಡಿ ಅವರನ್ನು ನೋಡಿ, ರೊಚ್ಚಿಗೆದ್ದಿದೆ. ಅದರಿಂದ ತಪ್ಪಿಸಿಕೊಳ್ಳಲು ಹೋಗಿದ್ದ ವೈದ್ಯೆ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಆಗ ಅವರನ್ನು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.</p>.<p>‘ಮೃಗಾಲಯದಲ್ಲಿ ಪಶು ವೈದ್ಯರ ಕೊರತೆ ಇದೆ. ಹಿಂದಿನ ವೈದ್ಯಾಧಿಕಾರಿ ಮುರುಳಿ ಮನೋಹರ್ ರಾಜೀನಾಮೆ ನೀಡಿ 4 ತಿಂಗಳು ಕಳೆದಿದೆ. ಇದುವರೆಗೂ ಹೊಸ ವೈದ್ಯಾಧಿಕಾರಿ ನೇಮಕ ಮಾಡಿಕೊಂಡಿಲ್ಲ. ಈ ವಿಚಾರ ನನ್ನ ಗಮನಕ್ಕೆ ಈಗ ಬಂದಿದ್ದು, ಸರ್ಕಾರ ಅರಣ್ಯ ಇಲಾಖೆಯ ಸಮಿತಿ ರಚಿಸಿದೆ. 7 ದಿನಗಳೊಳಗೆ ವರದಿ ನೀಡಬೇಕಿದೆ. ಅಲ್ಲದೆ, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-42-890672500</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಗೆ ಸಿಲುಕಿ ಮೃತಪಟ್ಟ ಬೆನ್ನಲ್ಲೇ ಶನಿವಾರ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗನಾಥ ಹಾಡ್ಯ ಧಾಮಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.</p>.<p>‘ಇದೊಂದು ದುರ್ಘಟನೆ. ಮೃತರ ಕುಟುಂಬದ ದುಃಖ ಭರಿಸಲು ಸಾಧ್ಯವಾಗುವುದಿಲ್ಲ. ನಮ್ಮ ಮೃಗಾಲಯದ ವೈದ್ಯೆ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಉಂಟಾಗಿದ್ದು ದುಃಖ ತಂದಿದೆ’ ಎಂದು ಅವರು ಈ ಸಂದರ್ಭ ಬೇಸರ ವ್ಯಕ್ತಪಡಿಸಿದರು.</p>.<p>‘ಘಟನೆ ಕುರಿತು ಪೊಲೀಸ್ ಹಾಗೂ ಅರಣ್ಯ ಇಲಾಖೆ ತನಿಖೆ ಆರಂಭಿಸಿವೆ. ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಡಾ. ಸಮೀಕ್ಷಾ ರೆಡ್ಡಿ ಮೃಗಾಲಯದಲ್ಲಿರುವ ಪ್ರಾಣಿಗಳ ಬಗ್ಗೆ ಅತಿಯಾದ ಪ್ರೀತಿ ಹೊಂದಿದ್ದರು. ಆ ಪ್ರೀತಿಯೇ ಅವರ ಪ್ರಾಣಕ್ಕೆ ಕುಂದು ತಂದಿರುವುದು ನೋವು ತಂದಿದೆ. ತಪ್ಪಿತಸ್ಥರು ಯಾರೇ ಆದರೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>ಇಬ್ಬರು ಸಿಬ್ಬಂದಿಯೊಂದಿಗೆ ಬಂದಿದ್ದ ಸಮೀಕ್ಷಾ ರೆಡ್ಡಿ ನೀರಾನೆಯ ಚಿಕಿತ್ಸೆಗೆ ಮುಂದಾಗಿದ್ದರು. ಅವರು ನೀರಾನೆ ಬಳಿ ಹೋದಾಗ, ಗರ್ಭಿಣಿ ನೀರಾನೆ ಹಂಸಿಣಿ ಸಿಟ್ಟಿಗೆದ್ದಿದೆ. ಹೆರಿಗೆ ದಿನ ಹತ್ತಿರಕ್ಕೆ ಬಂದಾಗ ಅದು ಊಟ ತಿಂಡಿ ಬಿಟ್ಟಿರುತ್ತದೆ. ಈ ವೇಳೆ ಸಮೀಕ್ಷಾ ರೆಡ್ಡಿ ಅವರನ್ನು ನೋಡಿ, ರೊಚ್ಚಿಗೆದ್ದಿದೆ. ಅದರಿಂದ ತಪ್ಪಿಸಿಕೊಳ್ಳಲು ಹೋಗಿದ್ದ ವೈದ್ಯೆ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಆಗ ಅವರನ್ನು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.</p>.<p>‘ಮೃಗಾಲಯದಲ್ಲಿ ಪಶು ವೈದ್ಯರ ಕೊರತೆ ಇದೆ. ಹಿಂದಿನ ವೈದ್ಯಾಧಿಕಾರಿ ಮುರುಳಿ ಮನೋಹರ್ ರಾಜೀನಾಮೆ ನೀಡಿ 4 ತಿಂಗಳು ಕಳೆದಿದೆ. ಇದುವರೆಗೂ ಹೊಸ ವೈದ್ಯಾಧಿಕಾರಿ ನೇಮಕ ಮಾಡಿಕೊಂಡಿಲ್ಲ. ಈ ವಿಚಾರ ನನ್ನ ಗಮನಕ್ಕೆ ಈಗ ಬಂದಿದ್ದು, ಸರ್ಕಾರ ಅರಣ್ಯ ಇಲಾಖೆಯ ಸಮಿತಿ ರಚಿಸಿದೆ. 7 ದಿನಗಳೊಳಗೆ ವರದಿ ನೀಡಬೇಕಿದೆ. ಅಲ್ಲದೆ, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-42-890672500</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>