<p><strong>ಶಿವಮೊಗ್ಗ</strong>: ನಗರದಲ್ಲಿ ಫುಟ್ಪಾತ್ ಮತ್ತು ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಇದ್ದ ಹೂವಿನ ಮಾರುಕಟ್ಟೆಯನ್ನು ಶನಿವಾರ ಬೆಳಿಗ್ಗೆ ತೆರವುಗೊಳಿಸಲಾಗಿದೆ.</p>.<p>ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದರು. ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಎನ್ಡಿವಿ ಹಾಸ್ಟೆಲ್ವರೆಗೆ ಇದ್ದ ಮಳಿಗೆಗಳನ್ನು ತೆರವು ಮಾಡಲಾಗಿದೆ.</p>.<p>ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು ಮತ್ತು ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿತ್ತು. ಹಾಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಅನಧಿಕೃತ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.</p>.<p>ಇನ್ನು, ಈ ಹಿಂದೆ ಸಂಚಾರ ಠಾಣೆ ಪೊಲೀಸರು ಈ ಮಳಿಗೆಗಳು ರಸ್ತೆಯ ಹೊರಗೆ ಇರಬೇಕೆಂದು ಸೂಚಿಸಿದ್ದರು. ರಸ್ತೆಯ ಎರಡು ಬದಿಗಿದ್ದ ಬಿಳಿ ಪಟ್ಟಿಯ ಹೊರಗೆ ಮಳಿಗೆಗಳನ್ನು ಇರಿಸುವಂತೆ ಗಡುವು ನೀಡಿದ್ದರು. ಆದರೆ, ದಿನ ಕಳೆದಂತೆ ಪುನಃ ಮಳಿಗೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿದ್ದವು.</p>.<p>ಆದ್ದರಿಂದ ಪಾಲಿಕೆ ಮತ್ತು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಠಾಣೆ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-958134274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ನಗರದಲ್ಲಿ ಫುಟ್ಪಾತ್ ಮತ್ತು ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಇದ್ದ ಹೂವಿನ ಮಾರುಕಟ್ಟೆಯನ್ನು ಶನಿವಾರ ಬೆಳಿಗ್ಗೆ ತೆರವುಗೊಳಿಸಲಾಗಿದೆ.</p>.<p>ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದರು. ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಎನ್ಡಿವಿ ಹಾಸ್ಟೆಲ್ವರೆಗೆ ಇದ್ದ ಮಳಿಗೆಗಳನ್ನು ತೆರವು ಮಾಡಲಾಗಿದೆ.</p>.<p>ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು ಮತ್ತು ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿತ್ತು. ಹಾಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಅನಧಿಕೃತ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.</p>.<p>ಇನ್ನು, ಈ ಹಿಂದೆ ಸಂಚಾರ ಠಾಣೆ ಪೊಲೀಸರು ಈ ಮಳಿಗೆಗಳು ರಸ್ತೆಯ ಹೊರಗೆ ಇರಬೇಕೆಂದು ಸೂಚಿಸಿದ್ದರು. ರಸ್ತೆಯ ಎರಡು ಬದಿಗಿದ್ದ ಬಿಳಿ ಪಟ್ಟಿಯ ಹೊರಗೆ ಮಳಿಗೆಗಳನ್ನು ಇರಿಸುವಂತೆ ಗಡುವು ನೀಡಿದ್ದರು. ಆದರೆ, ದಿನ ಕಳೆದಂತೆ ಪುನಃ ಮಳಿಗೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿದ್ದವು.</p>.<p>ಆದ್ದರಿಂದ ಪಾಲಿಕೆ ಮತ್ತು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಠಾಣೆ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-958134274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>