<p><strong>ಶಿವಮೊಗ್ಗ: </strong>ಒಂದೂವರೆ ತಿಂಗಳ ನಂತರ ಅಡಿಕೆ ವಹಿವಾಟು ಆರಂಭವಾದರೂ ಮಾರಾಟಕ್ಕೆ ಬೆಳೆಗಾರರು ಒಲವು ತೋರಿಲ್ಲ. ಸಹಕಾರ ಸಂಸ್ಥೆಗಳು, ಎಪಿಎಂಸಿ ಮಂಡಿಗಳೂ ಸೇರಿ ಮೂರು ದಿನಗಳಲ್ಲಿ 30 ಚೀಲ ಅಡಿಕೆ ಖರೀದಿಸಲೂ ಸಾಧ್ಯವಾಗಿಲ್ಲ.</p>.<p>ಮಲೆನಾಡುಅಡಿಕೆ ಮಾರಾಟ ಸಹಕಾರ ಸಂಘ ಮೊದಲ ದಿನವೇ ರೈತರಿಂದ ಅಡಿಕೆ ಖರೀದಿಸಲು ಉತ್ಸಾಹ ತೋರಿತ್ತು. ಕೊರೊನಾ ಕಾರಣದಿಂದ ಅಡಿಕೆ ಮಾರುಕಟ್ಟೆ ಸ್ಥಗಿತವಾಗುವ ಮೊದಲು ಇದ್ದ ಕ್ವಿಂಟಲ್ಗೆ ₹ 36 ಸಾವಿರ ಗರಿಷ್ಠ ದರವನ್ನೂ ಟೆಂಡರ್ನಲ್ಲಿ ನಮೂದಿಸಿತ್ತು. ಮ್ಯಾಮ್ಕೋಸ್ ಪ್ರಾಂಗಣಕ್ಕೆ 140 ಮೂಟೆ ಅಡಿಕೆ ಬಂದರೂ, ನಮೂದಿತ ದರಕ್ಕೆ ಅಡಿಕೆ ಮಾರಾಟ ಮಾಡಿದ್ದು ಕೇವಲ 14 ಚೀಲ. ಅತ್ತ ಎಪಿಎಂಸಿ ಮಂಡಿಗಳಲ್ಲೂ ರೈತರು 10 ಚೀಲ ಅಡಿಕೆ ಮಾರಾಟ ಮಾಡಿಲ್ಲ. ವರ್ತಕರೂ ಉತ್ಸಾಹ ತೋರಿಲ್ಲ.</p>.<p>‘ಸಾಗಣೆ, ಕಾರ್ಮಿಕರ ಸಮಸ್ಯೆ ಇದೆ. ಪಾನ್ ಮಸಾಲ ಕಂಪನಿಗಳೂ ಪೂರ್ಣ ಉತ್ಪಾದನೆ ಆರಂಭಿಸಿಲ್ಲ. ಅಡಿಕೆ ವಹಿವಾಟು ಪೂರ್ಣ ಪ್ರಮಾಣದಲ್ಲಿ ನಡೆಯಲು ಸ್ವಲ್ಪ ಸಮಯ ಬೇಕಿದೆ’ಎನ್ನುತ್ತಾರೆ ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಮಲ್ಲಿಕಾರ್ಜುನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಒಂದೂವರೆ ತಿಂಗಳ ನಂತರ ಅಡಿಕೆ ವಹಿವಾಟು ಆರಂಭವಾದರೂ ಮಾರಾಟಕ್ಕೆ ಬೆಳೆಗಾರರು ಒಲವು ತೋರಿಲ್ಲ. ಸಹಕಾರ ಸಂಸ್ಥೆಗಳು, ಎಪಿಎಂಸಿ ಮಂಡಿಗಳೂ ಸೇರಿ ಮೂರು ದಿನಗಳಲ್ಲಿ 30 ಚೀಲ ಅಡಿಕೆ ಖರೀದಿಸಲೂ ಸಾಧ್ಯವಾಗಿಲ್ಲ.</p>.<p>ಮಲೆನಾಡುಅಡಿಕೆ ಮಾರಾಟ ಸಹಕಾರ ಸಂಘ ಮೊದಲ ದಿನವೇ ರೈತರಿಂದ ಅಡಿಕೆ ಖರೀದಿಸಲು ಉತ್ಸಾಹ ತೋರಿತ್ತು. ಕೊರೊನಾ ಕಾರಣದಿಂದ ಅಡಿಕೆ ಮಾರುಕಟ್ಟೆ ಸ್ಥಗಿತವಾಗುವ ಮೊದಲು ಇದ್ದ ಕ್ವಿಂಟಲ್ಗೆ ₹ 36 ಸಾವಿರ ಗರಿಷ್ಠ ದರವನ್ನೂ ಟೆಂಡರ್ನಲ್ಲಿ ನಮೂದಿಸಿತ್ತು. ಮ್ಯಾಮ್ಕೋಸ್ ಪ್ರಾಂಗಣಕ್ಕೆ 140 ಮೂಟೆ ಅಡಿಕೆ ಬಂದರೂ, ನಮೂದಿತ ದರಕ್ಕೆ ಅಡಿಕೆ ಮಾರಾಟ ಮಾಡಿದ್ದು ಕೇವಲ 14 ಚೀಲ. ಅತ್ತ ಎಪಿಎಂಸಿ ಮಂಡಿಗಳಲ್ಲೂ ರೈತರು 10 ಚೀಲ ಅಡಿಕೆ ಮಾರಾಟ ಮಾಡಿಲ್ಲ. ವರ್ತಕರೂ ಉತ್ಸಾಹ ತೋರಿಲ್ಲ.</p>.<p>‘ಸಾಗಣೆ, ಕಾರ್ಮಿಕರ ಸಮಸ್ಯೆ ಇದೆ. ಪಾನ್ ಮಸಾಲ ಕಂಪನಿಗಳೂ ಪೂರ್ಣ ಉತ್ಪಾದನೆ ಆರಂಭಿಸಿಲ್ಲ. ಅಡಿಕೆ ವಹಿವಾಟು ಪೂರ್ಣ ಪ್ರಮಾಣದಲ್ಲಿ ನಡೆಯಲು ಸ್ವಲ್ಪ ಸಮಯ ಬೇಕಿದೆ’ಎನ್ನುತ್ತಾರೆ ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಮಲ್ಲಿಕಾರ್ಜುನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>