<p>ಶಿವಮೊಗ್ಗ: ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಗರದ ಅನವರತ ಫೌಂಡೇಷನ್ ಮತ್ತು ಸಂಸ್ಕಾರ ಭಾರತಿ ಸಹಯೋಗದೊಂದಿಗೆ ಏ.18ರಂದು ಬೆಳಿಗ್ಗೆ 9ರಿಂದ ರಾತ್ರಿ 8ರ ವರೆಗೆ ನಾನೇ ಭಾರತ-ತಾಯಿ ಭಾರತಿಗೆ ಕನ್ನಡದಾರತಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅನವರತ ಫೌಂಡೇಷನ್ ಅಧ್ಯಕ್ಷರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.</p>.<p>ದೇಶದ ಐತಿಹಾಸದ ಸತ್ಯ ಸಂಗತಿಗಳನ್ನು ಸಾರ್ವಜನಿಕರಿಗೆ ತಿಳಿಸುವುದು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೂರು ಹಂತಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಕರ್ನಲ್ ಎ.ಎಸ್. ರಘುನಾಥ್ ಅವರಿಂದ ರಾಷ್ಟ್ರಧ್ವಜಾರೋಹಣ ನಡೆಯಲಿದೆ. ಈ ವೇಳೆ ಶಿವಮೊಗ್ಗದ ಸಂಗೀತ ಶಾಲೆಗಳ 150 ಗಾಯಕರು ವಂದೇ ಮಾತರಂ ಹಾಡಲಿದ್ದಾರೆ. ನಂತರ ಸ್ವಾತಂತ್ರ್ಯ ಹೋರಾಟಗಾರ ವಾಸುದೇವ್ ಬಲವಂತ್ ಫಡ್ಕೆ ಅವರ ಕುರಿತ`ಅಧಮ್ಯ ಭಾರತ’ ವಿಶೇಷ ಪ್ರದರ್ಶನ ನಡೆಯಲಿದೆ ಎಂದರು.</p>.<p>ಸಂಜೆ 5.30ಕ್ಕೆ ಚಕ್ರವರ್ತಿ ಸೂಲಿಬೆಲೆ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಸಂಗೀತ ದಿಗ್ಗಜರಾದ ಪ್ರಹ್ಲಾದ್ ದೀಕ್ಷಿತ್, ವಿದ್ವಾನ್ ಎಚ್.ಎಸ್. ನಾಗರಾಜ್, ಗಾಯಕ ಅರುಣ್ ಅವರಿಂದ ದೇಶಭಕ್ತಿ ಗೀತಗಾಯನ ನಡೆಯಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಾಗರಾಜ್, ಜ್ಞಾನೇಶ್ವರ, ಮೋಹನ, ಸಂಸ್ಕಾರ ಭಾರತೀಯ ಸವಿತಾ ಮಾಧವ್, ರಂಜನಿ ಬಿದರಳ್ಳಿ, ಚೈತ್ರಾ ಸಜ್ಜನ್, ವಸುಂಧರಾ, ಮಂಜುನಾಥ್, ಸಹನಾ ಚೇತನಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-42-1465788201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಗರದ ಅನವರತ ಫೌಂಡೇಷನ್ ಮತ್ತು ಸಂಸ್ಕಾರ ಭಾರತಿ ಸಹಯೋಗದೊಂದಿಗೆ ಏ.18ರಂದು ಬೆಳಿಗ್ಗೆ 9ರಿಂದ ರಾತ್ರಿ 8ರ ವರೆಗೆ ನಾನೇ ಭಾರತ-ತಾಯಿ ಭಾರತಿಗೆ ಕನ್ನಡದಾರತಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅನವರತ ಫೌಂಡೇಷನ್ ಅಧ್ಯಕ್ಷರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.</p>.<p>ದೇಶದ ಐತಿಹಾಸದ ಸತ್ಯ ಸಂಗತಿಗಳನ್ನು ಸಾರ್ವಜನಿಕರಿಗೆ ತಿಳಿಸುವುದು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೂರು ಹಂತಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಕರ್ನಲ್ ಎ.ಎಸ್. ರಘುನಾಥ್ ಅವರಿಂದ ರಾಷ್ಟ್ರಧ್ವಜಾರೋಹಣ ನಡೆಯಲಿದೆ. ಈ ವೇಳೆ ಶಿವಮೊಗ್ಗದ ಸಂಗೀತ ಶಾಲೆಗಳ 150 ಗಾಯಕರು ವಂದೇ ಮಾತರಂ ಹಾಡಲಿದ್ದಾರೆ. ನಂತರ ಸ್ವಾತಂತ್ರ್ಯ ಹೋರಾಟಗಾರ ವಾಸುದೇವ್ ಬಲವಂತ್ ಫಡ್ಕೆ ಅವರ ಕುರಿತ`ಅಧಮ್ಯ ಭಾರತ’ ವಿಶೇಷ ಪ್ರದರ್ಶನ ನಡೆಯಲಿದೆ ಎಂದರು.</p>.<p>ಸಂಜೆ 5.30ಕ್ಕೆ ಚಕ್ರವರ್ತಿ ಸೂಲಿಬೆಲೆ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಸಂಗೀತ ದಿಗ್ಗಜರಾದ ಪ್ರಹ್ಲಾದ್ ದೀಕ್ಷಿತ್, ವಿದ್ವಾನ್ ಎಚ್.ಎಸ್. ನಾಗರಾಜ್, ಗಾಯಕ ಅರುಣ್ ಅವರಿಂದ ದೇಶಭಕ್ತಿ ಗೀತಗಾಯನ ನಡೆಯಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಾಗರಾಜ್, ಜ್ಞಾನೇಶ್ವರ, ಮೋಹನ, ಸಂಸ್ಕಾರ ಭಾರತೀಯ ಸವಿತಾ ಮಾಧವ್, ರಂಜನಿ ಬಿದರಳ್ಳಿ, ಚೈತ್ರಾ ಸಜ್ಜನ್, ವಸುಂಧರಾ, ಮಂಜುನಾಥ್, ಸಹನಾ ಚೇತನಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-42-1465788201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>