ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮುಖ್ಯಮಂತ್ರಿಗೆ ವೀರಶೈವ ಯುವ ಸಂಗಮ ಬೆಂಬಲ

Last Updated 21 ಜುಲೈ 2021, 12:13 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸದೆ, ಅವರನ್ನೇ ಉಳಿದ ಅವಧಿಗೆ ಮುಂದುವರಿಸಬೇಕು ಎಂದು ಜಿಲ್ಲಾ ವೀರಶೈವ ಯುವ ಸಂಗಮ ವೇದಿಕೆ ಮುಖಂಡರು ಒತ್ತಾಯಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ ಪಕ್ಷದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರಲಿದೆ. ಕೊರೊನಾನಾದಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ಉತ್ತಮ ಆಡಳಿತ ನೀಡಿದ್ದಾರೆ. ಸಿಕ್ಕ ಅವಕಾಶದಲ್ಲಿ ನೆರೆ, ಅತಿವೃಷ್ಟಿ, ಕೊರೊನಾ ನಿರ್ವಹಣೆಗೆ ಹೆಚ್ಚಿನ ಸಮಯ ವಿನಿಯೋಗಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷ ಅಧಿಕಾರಕ್ಕೆ ತಂದವರನ್ನು ಆತುರದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ ಬೇರೆ ಸಂದೇಶ ಹೊಂದಂತಾಗುತ್ತದೆ ಎಂದು ವೇದಿಕೆಯ ಅಧ್ಯಕ್ಷ ಗಣೇಶ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಮುಖಂಡರಾದ ಸುರೇಶ್, ಎನ್.ಪರಮೇಶ್, ಉಮಾಶಂಕರ್, ಸುರೇಖಾ, ಅಭಿನಂದನ್, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT