ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ದೂರುತ್ತಿವೆ. ‘ತಾನು ಕಳ್ಳ ಪರರ ನಂಬ’ ಎಂಬ ಮಾತಿನಂತೆ ಆರೋಪಿಸುತ್ತಿವೆ. ಯಾವುದೇ ಪಕ್ಷದ ಅಭ್ಯರ್ಥಿಗಳು ಪೂರ್ವಗ್ರಹ ಪೀಡಿತರಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಪಕ್ಷ, ಅಭ್ಯರ್ಥಿಗಳು ಚಟುವಟಿಕೆಯಿಂದ ಜನರ ಜತೆ ಕೆಲಸ ಮಾಡಿದರೆ ಗೆಲುವು ಸಾಧ್ಯ. ಬಿಜೆಪಿ ಎರಡೂ ಕ್ಷೇತ್ರ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.