<p><strong>ಶಿವಮೊಗ್ಗ</strong>: ‘ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಹೀಗಾಗಿ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ’ ಎಂದು ಆಭರಣ ಜ್ಯುವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.</p>.<p>ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಆಯೋಜಿಸಿದ್ದ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ’ ಎಂದು ತಿಳಿಸಿದರು.</p>.<p>ಇನ್ನರ್ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್, ‘ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೇ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ಆರ್ಥಿಕವಾಗಿ ಸಬಲರಾಗಬೇಕು. ಇದರಿಂದ ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ’ ಎಂದು ಹೇಳಿದರು.</p>.<p> ಉದ್ಯಮಿ ಕಡಿದಾಳ್ ಗೋಪಾಲ್, ‘ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್.ಮನೋಹರ್, ಕಡಿದಾಳ್ ಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಹೀಗಾಗಿ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ’ ಎಂದು ಆಭರಣ ಜ್ಯುವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.</p>.<p>ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಆಯೋಜಿಸಿದ್ದ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ’ ಎಂದು ತಿಳಿಸಿದರು.</p>.<p>ಇನ್ನರ್ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್, ‘ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೇ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ಆರ್ಥಿಕವಾಗಿ ಸಬಲರಾಗಬೇಕು. ಇದರಿಂದ ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ’ ಎಂದು ಹೇಳಿದರು.</p>.<p> ಉದ್ಯಮಿ ಕಡಿದಾಳ್ ಗೋಪಾಲ್, ‘ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್.ಮನೋಹರ್, ಕಡಿದಾಳ್ ಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>