<p><strong>ಶಿವಮೊಗ್ಗ :</strong> ಸಮೀಪದ ಯಲವಟ್ಟಿ ಗ್ರಾಮದ ಜಗದ್ಗುರು ಸಚ್ಚಿದಾನಂದ ಗ್ರಾಮೀಣ ವಸತಿ ಪ್ರೌಢಶಾಲೆಗೆ ಈ ಸಾಲಿನಲ್ಲಿ ಪ್ರವೇಶ ಪಡೆಯುವ ಮೊದಲ 50 ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪ್ರವೇಶ ಮತ್ತು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಚಂದ್ರಶೇಖರಯ್ಯ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಕ್ಕಿನಕಲ್ಮಠದ ಶ್ರೀಗಳ ಆಶಯದಂತೆ 1986ರಲ್ಲಿ ಶಾಲೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು ಹಾಗೂ ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳಿಗೆ ಅನುಕೂಲವಾಗಲು ಈ ಶಾಲೆ ಆರಂಭಿಸಲಾಗಿದೆ’ ಎಂದರು.</p>.<p>ಈ ಶಾಲೆಯು ಗುರುಪುರ, ಪುರಲೆ, ವೆಂಕಟೇಶ ನಗರ, ಹಸೂಡಿ, ಯಲವಟ್ಟಿ, ಯಲವಟ್ಟಿ ತಾಂಡಾ, ಹೊಳೆಬೆನವಳ್ಳಿ, ಹಕ್ಕಿಪಕ್ಕಿ ಕ್ಯಾಂಪ್, ಶೆಟ್ಟಿಹಳ್ಳಿ ಭಾಗದ ಮಕ್ಕಳಿಗೆ ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಶೇ 100ರಷ್ಟು ಆಗಿದ್ದು, ಈ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತವೀರಪ್ಪ, ಪ್ರಮುಖರಾದ ಚಂದ್ರಪ್ಪ, ಶಿಕ್ಷಕರಾದ ಜೆ.ನಿಜಗುಣಾರಾಧ್ಯ, ರೂಪಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-42-867738363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ :</strong> ಸಮೀಪದ ಯಲವಟ್ಟಿ ಗ್ರಾಮದ ಜಗದ್ಗುರು ಸಚ್ಚಿದಾನಂದ ಗ್ರಾಮೀಣ ವಸತಿ ಪ್ರೌಢಶಾಲೆಗೆ ಈ ಸಾಲಿನಲ್ಲಿ ಪ್ರವೇಶ ಪಡೆಯುವ ಮೊದಲ 50 ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪ್ರವೇಶ ಮತ್ತು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಚಂದ್ರಶೇಖರಯ್ಯ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಕ್ಕಿನಕಲ್ಮಠದ ಶ್ರೀಗಳ ಆಶಯದಂತೆ 1986ರಲ್ಲಿ ಶಾಲೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು ಹಾಗೂ ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳಿಗೆ ಅನುಕೂಲವಾಗಲು ಈ ಶಾಲೆ ಆರಂಭಿಸಲಾಗಿದೆ’ ಎಂದರು.</p>.<p>ಈ ಶಾಲೆಯು ಗುರುಪುರ, ಪುರಲೆ, ವೆಂಕಟೇಶ ನಗರ, ಹಸೂಡಿ, ಯಲವಟ್ಟಿ, ಯಲವಟ್ಟಿ ತಾಂಡಾ, ಹೊಳೆಬೆನವಳ್ಳಿ, ಹಕ್ಕಿಪಕ್ಕಿ ಕ್ಯಾಂಪ್, ಶೆಟ್ಟಿಹಳ್ಳಿ ಭಾಗದ ಮಕ್ಕಳಿಗೆ ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಶೇ 100ರಷ್ಟು ಆಗಿದ್ದು, ಈ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತವೀರಪ್ಪ, ಪ್ರಮುಖರಾದ ಚಂದ್ರಪ್ಪ, ಶಿಕ್ಷಕರಾದ ಜೆ.ನಿಜಗುಣಾರಾಧ್ಯ, ರೂಪಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-42-867738363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>