ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಶಿವಮೊಗ್ಗ ತಹಶೀಲ್ದಾರ್‌ ನಾಗರಾಜ್‌ ಅಮಾನತು

Published 12 ಸೆಪ್ಟೆಂಬರ್ 2023, 16:07 IST
Last Updated 12 ಸೆಪ್ಟೆಂಬರ್ 2023, 16:07 IST
ಅಕ್ಷರ ಗಾತ್ರ

ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್‌ ಎನ್‌.ಜೆ.ನಾಗರಾಜ್‌ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್‌ 1 ತಹಶೀಲ್ದಾರ್‌ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪದ ಸಂಬಂಧ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ನಾಗರಾಜ್‌ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT