ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿವೆ. ಅಲ್ಲಿರುವ ಕುಳಿಗಳೇ ಸಾಕ್ಷಿ ಹೇಳುತ್ತವೆ. ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲವಂತೆ. ಜಿಲ್ಲಾಡಳಿತ ಮಲಗಿದೆ. ಹಾಗಾಗಿ, ಸ್ಥಳೀಯ ಅಧಿಕಾರಿಗಳಿಂದ ತನಿಖೆ ನಡೆದರೆ ಸತ್ಯ ಹೊರಬರಲು ಸಾಧ್ಯವಿಲ್ಲ. ಹೈಕೋರ್ಟ್ ನ್ಯಾಯಾಧೀಶರಿಂದಲೇ ತನಿಖೆಯಾಗಬೇಕು. ತಪ್ಪಿಸ್ಥ ಆರೋಪಿಗಳ ಜತೆಗೆ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು, ರಾಜಕಾರಣಿಗಳಿಗೂ ಶಿಕ್ಷೆಯಾಗಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.