<p><strong>ಸಾಗರ:</strong> ಶರಾವತಿ ಮುಳುಗಡೆ ಪ್ರದೇಶದ ಜನರ ಹಲವು ದಶಕಗಳ ಕನಸು ಈಡೇರುವ ದಿನ ಹತ್ತಿರವಾಗುತ್ತಿದ್ದು ಸಿಗಂದೂರು ಸೇತುವೆ ಉದ್ಘಾಟನೆ 2025 ಏಪ್ರಿಲ್, ಮೇ ಹೊತ್ತಿಗೆ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. </p>.<p>ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಸೇತುವೆ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. </p>.<p>₹ 423.15 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ 2.25 ಕಿ.ಮೀ. ಉದ್ದದ ಸೇತುವೆ ವಿಶಿಷ್ಟ ವಿನ್ಯಾಸ ಹೊಂದಿದ್ದು ಕಾಮಗಾರಿ ಭರದಿಂದ ಸಾಗಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು. </p>.<p>ನಾಡಿಗೆ ಬೆಳಕು ನೀಡಲು ಜಲ ವಿದ್ಯುತ್ ಯೋಜನೆಗಾಗಿ ಈ ಭಾಗದ ಜನ ತಮ್ಮ ಬದುಕನ್ನೆ ತ್ಯಾಗ ಮಾಡಿದ್ದಾರೆ. ಅವರಿಗಾಗಿ ಸೇತುವೆ ನಿರ್ಮಾಣಗೊಳ್ಳುತ್ತಿರುವುದು ಸಾರ್ಥಕ ಭಾವನೆ ಮೂಡಿಸಿದೆ. ಜೊತೆಗೆ ಸಿಗಂದೂರು ಕ್ಷೇತ್ರದ ದರ್ಶನಕ್ಕೆ ಬರುವ ಅಪಾರ ಸಂಖ್ಯೆಯ ಭಕ್ತರಿಗೂ ಸೇತುವೆಯಿಂದ ಅನುಕೂಲವಾಗಲಿದೆ ಎಂದರು.</p>.<p>ಸೇತುವೆ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದ ಪ್ರವಾಸೋದ್ಯಮ ಮತ್ತಷ್ಟು ಅಭಿವೃದ್ಧಿಗೊಳ್ಳುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಇರುವ ಸಂಪರ್ಕದ ದೂರವನ್ನು ಸೇತುವೆ ಕಡಿಮೆ ಮಾಡುವುದು ಕೂಡ ಪ್ರಮುಖ ಸಂಗತಿಯಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಶರಾವತಿ ಮುಳುಗಡೆ ಪ್ರದೇಶದ ಜನರ ಹಲವು ದಶಕಗಳ ಕನಸು ಈಡೇರುವ ದಿನ ಹತ್ತಿರವಾಗುತ್ತಿದ್ದು ಸಿಗಂದೂರು ಸೇತುವೆ ಉದ್ಘಾಟನೆ 2025 ಏಪ್ರಿಲ್, ಮೇ ಹೊತ್ತಿಗೆ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. </p>.<p>ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಸೇತುವೆ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. </p>.<p>₹ 423.15 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ 2.25 ಕಿ.ಮೀ. ಉದ್ದದ ಸೇತುವೆ ವಿಶಿಷ್ಟ ವಿನ್ಯಾಸ ಹೊಂದಿದ್ದು ಕಾಮಗಾರಿ ಭರದಿಂದ ಸಾಗಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು. </p>.<p>ನಾಡಿಗೆ ಬೆಳಕು ನೀಡಲು ಜಲ ವಿದ್ಯುತ್ ಯೋಜನೆಗಾಗಿ ಈ ಭಾಗದ ಜನ ತಮ್ಮ ಬದುಕನ್ನೆ ತ್ಯಾಗ ಮಾಡಿದ್ದಾರೆ. ಅವರಿಗಾಗಿ ಸೇತುವೆ ನಿರ್ಮಾಣಗೊಳ್ಳುತ್ತಿರುವುದು ಸಾರ್ಥಕ ಭಾವನೆ ಮೂಡಿಸಿದೆ. ಜೊತೆಗೆ ಸಿಗಂದೂರು ಕ್ಷೇತ್ರದ ದರ್ಶನಕ್ಕೆ ಬರುವ ಅಪಾರ ಸಂಖ್ಯೆಯ ಭಕ್ತರಿಗೂ ಸೇತುವೆಯಿಂದ ಅನುಕೂಲವಾಗಲಿದೆ ಎಂದರು.</p>.<p>ಸೇತುವೆ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದ ಪ್ರವಾಸೋದ್ಯಮ ಮತ್ತಷ್ಟು ಅಭಿವೃದ್ಧಿಗೊಳ್ಳುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಇರುವ ಸಂಪರ್ಕದ ದೂರವನ್ನು ಸೇತುವೆ ಕಡಿಮೆ ಮಾಡುವುದು ಕೂಡ ಪ್ರಮುಖ ಸಂಗತಿಯಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>