<p><strong>ಸಾಗರ: </strong>ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಮಾರ್ಚ್ 2ರಂದು ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ. </p>.<p>ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು, ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. </p>.<p>ಪಕ್ಷಾತೀತವಾಗಿ ನಡೆಯಲಿರುವ ಹೆದ್ದಾರಿ ತಡೆ ಚಳವಳಿಯಲ್ಲಿ ಸಂತ್ರಸ್ತರು ಸೇರಿದಂತೆ ರೈತರ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಮುಖರಾದ ಅಶೋಕ್ ಬೇಸೂರು,ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಇದ್ದರು.</p>
<p><strong>ಸಾಗರ: </strong>ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಮಾರ್ಚ್ 2ರಂದು ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ. </p>.<p>ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು, ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. </p>.<p>ಪಕ್ಷಾತೀತವಾಗಿ ನಡೆಯಲಿರುವ ಹೆದ್ದಾರಿ ತಡೆ ಚಳವಳಿಯಲ್ಲಿ ಸಂತ್ರಸ್ತರು ಸೇರಿದಂತೆ ರೈತರ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಮುಖರಾದ ಅಶೋಕ್ ಬೇಸೂರು,ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಇದ್ದರು.</p>