<p><strong>ಸಾಗರ: </strong>ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಮಾರ್ಚ್ 2ರಂದು ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ. </p>.<p>ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು, ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. </p>.<p>ಪಕ್ಷಾತೀತವಾಗಿ ನಡೆಯಲಿರುವ ಹೆದ್ದಾರಿ ತಡೆ ಚಳವಳಿಯಲ್ಲಿ ಸಂತ್ರಸ್ತರು ಸೇರಿದಂತೆ ರೈತರ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಮುಖರಾದ ಅಶೋಕ್ ಬೇಸೂರು,ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಮಾರ್ಚ್ 2ರಂದು ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ. </p>.<p>ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು, ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. </p>.<p>ಪಕ್ಷಾತೀತವಾಗಿ ನಡೆಯಲಿರುವ ಹೆದ್ದಾರಿ ತಡೆ ಚಳವಳಿಯಲ್ಲಿ ಸಂತ್ರಸ್ತರು ಸೇರಿದಂತೆ ರೈತರ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಮುಖರಾದ ಅಶೋಕ್ ಬೇಸೂರು,ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>