ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಈಗಾಗಲೇ ದೇವಾಲಯದ ಬಾಗಿಲು ಮುಚ್ಚಿದ್ದರೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬಂದು ದೇವಸ್ಥಾನದ ಹೊರಗೆ ಕೈಮುಗಿದು ಮರಳುತ್ತಿದ್ದಾರೆ. ಇದರಿಂದಾಗಿ ಸಿಗಂದೂರಿಗೆ ಬರುವ ಲಾಂಚ್ನಲ್ಲಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಿಗಂದೂರಿಗೆ ಪ್ರವಾಸಿಗರು ಬರಲು ಕೆಲವು ನಿರ್ಬಂಧಗಳನ್ನು ಜಿಲ್ಲಾಡಳಿತ ಹೇರಬೇಕು ಎಂದು ಅವರು ಮನವಿ ಮಾಡಿದ್ದಾರೆ.