<p><strong>ಶಿವಮೊಗ್ಗ: </strong>ಸಾಗರ ತಾಲ್ಲೂಕು ಶರಾವತಿ ಹಿನ್ನೀರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ದೇವಸ್ಥಾನದ ಆಂತರಿಕ ವಿವಾದ ತಾರಕ್ಕೇರುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಘಟನೆಯ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದೆ.</p>.<p>ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span> ಕೆ.ಎಂ.ಶಾಂತರಾಜು ಅವರು ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್ಟರನ್ನು ಹಲವು ತಾಸು ವಿಚಾರಣೆಗೆ ಒಳಪಡಿಸಿದರು. ದೇವಸ್ಥಾನದ ಆದಾಯ, ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಪಡೆದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ, ಧರ್ಮದರ್ಶಿ ಮಧ್ಯೆ ಹಲವು ದಿನಗಳಿಂದ ಸಂಘರ್ಷವಿತ್ತು. ಶುಕ್ರವಾರ ಅವರ ಸಹೋದರ ಸುಬ್ರಾಯ ಭಟ್ ಸ್ಥಳೀಯರೊಬ್ಬರ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದರು. ದೇವಸ್ಥಾನದ ಆವರಣದಲ್ಲಿ ಚಂಡಿಕಾ ಹೋಮ ನಡೆಸಲು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ ಎಂದು ಅರ್ಚಕರ ಕುಟುಂಬ ಮೌನ ವ್ರತ ಕೈಗೊಂಡಿತ್ತು. ನಂತರ ಪೂಜೆಗೆ ಬಂದಿದ್ದ ದ್ಯಾವಪ್ಪ ಗೌಡ, ದೇವಸ್ಥಾನದ ಸಿಬ್ಬಂದಿ ಮಹೇಶ್, ವಿಮಲಾ ಅವರ ಮೇಲೆ ಹಲ್ಲೆ ನಡೆಸಿದ್ದರು. ದೇವಸ್ಥಾನದ ಕಚೇರಿ ಕಿಟಕಿ ಗಾಜು ಒಡೆದಿದ್ದರು.</p>.<p><strong>ಪ್ರತಿಭಟನೆ: </strong>ಅರ್ಚಕರ ಸಹೋದರನ ವಿರುದ್ಧ ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ ದೂರು ನೀಡಿದ್ದಾರೆ. ಹಲ್ಲೆ ನಡೆಸಿದ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿ ಈಡಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.</p>.<p>‘ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಲ್ಲಿನ ಆಸ್ತಿ, ಹಣಕಾಸು ವ್ಯವಹಾರ ಕುರಿತು ಸರ್ಕಾರಕ್ಕೆ ವರದಿ ನೀಡುತ್ತೇನೆ’ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಮಾಹಿತಿ ನೀಡಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/shivamogga/sigandur-chowdeshwari-temple-priests-assault-case-771440.html" target="_blank">ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರ ಸಹೋದರನಿಂದ ಹಲ್ಲೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಾಗರ ತಾಲ್ಲೂಕು ಶರಾವತಿ ಹಿನ್ನೀರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ದೇವಸ್ಥಾನದ ಆಂತರಿಕ ವಿವಾದ ತಾರಕ್ಕೇರುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಘಟನೆಯ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದೆ.</p>.<p>ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span> ಕೆ.ಎಂ.ಶಾಂತರಾಜು ಅವರು ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್ಟರನ್ನು ಹಲವು ತಾಸು ವಿಚಾರಣೆಗೆ ಒಳಪಡಿಸಿದರು. ದೇವಸ್ಥಾನದ ಆದಾಯ, ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಪಡೆದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ, ಧರ್ಮದರ್ಶಿ ಮಧ್ಯೆ ಹಲವು ದಿನಗಳಿಂದ ಸಂಘರ್ಷವಿತ್ತು. ಶುಕ್ರವಾರ ಅವರ ಸಹೋದರ ಸುಬ್ರಾಯ ಭಟ್ ಸ್ಥಳೀಯರೊಬ್ಬರ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದರು. ದೇವಸ್ಥಾನದ ಆವರಣದಲ್ಲಿ ಚಂಡಿಕಾ ಹೋಮ ನಡೆಸಲು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ ಎಂದು ಅರ್ಚಕರ ಕುಟುಂಬ ಮೌನ ವ್ರತ ಕೈಗೊಂಡಿತ್ತು. ನಂತರ ಪೂಜೆಗೆ ಬಂದಿದ್ದ ದ್ಯಾವಪ್ಪ ಗೌಡ, ದೇವಸ್ಥಾನದ ಸಿಬ್ಬಂದಿ ಮಹೇಶ್, ವಿಮಲಾ ಅವರ ಮೇಲೆ ಹಲ್ಲೆ ನಡೆಸಿದ್ದರು. ದೇವಸ್ಥಾನದ ಕಚೇರಿ ಕಿಟಕಿ ಗಾಜು ಒಡೆದಿದ್ದರು.</p>.<p><strong>ಪ್ರತಿಭಟನೆ: </strong>ಅರ್ಚಕರ ಸಹೋದರನ ವಿರುದ್ಧ ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ ದೂರು ನೀಡಿದ್ದಾರೆ. ಹಲ್ಲೆ ನಡೆಸಿದ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿ ಈಡಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.</p>.<p>‘ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಲ್ಲಿನ ಆಸ್ತಿ, ಹಣಕಾಸು ವ್ಯವಹಾರ ಕುರಿತು ಸರ್ಕಾರಕ್ಕೆ ವರದಿ ನೀಡುತ್ತೇನೆ’ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಮಾಹಿತಿ ನೀಡಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/shivamogga/sigandur-chowdeshwari-temple-priests-assault-case-771440.html" target="_blank">ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರ ಸಹೋದರನಿಂದ ಹಲ್ಲೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>