<p><strong>ತುಮರಿ</strong>: ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಎರಡನೇ ದಿನವೂ ದೇವಿಗೆ ವಿಶೇಷ ಪೂಜೆ ನೇರವೇರಿತು.</p>.<p>ಗುರುವಾರ ಬೆಳಿಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅರ್ಚನೆ, ನವ ಚಂಡಿಕಾ ಹೋಮ ನೆರವೇರಿತು. ದೇವಸ್ಥಾನದ ಧರ್ಮದರ್ಶಿ ಎಸ್. ರಾಮಪ್ಪ ದಂಪತಿ ಕುಟುಂಬ ಸಮೇತರಾಗಿ ಚಂಡಿಕಾ ಹವನ ಪೂರ್ಣಾಹುತಿಯಲ್ಲಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನ ನಡೆಸಿಕೊಟ್ಟರು.</p>.<p>ಇದೇ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಾಕಪ್ಪ ಕಣ್ಣೂರು ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.</p>.<p>ಜಾತ್ರೆಯ ಅಂಗವಾಗಿ ತುಮರಿಯ ಸಿಗಂದೂರೇಶ್ವರಿ ಕಲಾ ತಂಡದಿಂದ ಜನಪದ ಗೀತಾ ಗಾಯನ, ಸ್ಥಳೀಯ ಭಜನಾ ಮಂಡಳಿ ತಂಡದಿಂದ ಭಜನೆ ನಡೆಯಿತು.</p>.<p><strong>ಭಕ್ತಸಾಗರ:</strong></p>.<p>ಎರಡನೇ ದಿನದ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿ ದೇವಿಗೆ ಹೂವು, ಅಕ್ಕಿ, ಬೆಲ್ಲ ಅರ್ಪಿಸಿ ಹರಕೆ ಪೂಜೆ ಸಲ್ಲಿಸಿ, ಮುಡಿಗಂಧ ಪ್ರಸಾದ ಸ್ವೀಕರಿಸಿದರು.</p>.<p>ಮಧ್ಯಾಹ್ನ ದಾಸೋಹದಲ್ಲಿ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ಅನ್ನ ಪ್ರಸಾದ ಪಡೆದರು. ಭಕ್ತಾದಿಗಳು ಸಂಖ್ಯೆ ಹೆಚ್ಚಿದ್ದ ಹಿನ್ನೆಲೆಯಲ್ಲಿ ನಿರಂತರವಾಗಿ ಬೆಳಿಗ್ಗೆ, ಮಧ್ಯಾಹ್ನ, ಸಂಜೆ ದೇವಸ್ಥಾನ ಸಮಿತಿಯು ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಿತ್ತು.</p>.<p>ಪಟ್ಲ ಸತೀಶ್ ಶೆಟ್ಟರ ಭಾಗವತಿಕೆಯ ಪಾವಂಜೆ ಮೇಳದಿಂದ ಶ್ರೀದೇವಿ ಲಲಿತೋಪಾಖ್ಯಾನ ಯಕ್ಷಗಾನ ನೋಡಲು ಆಪಾರ ಜನಸ್ತೋಮ ಕಂಡುಬಂತು. ದೇವಸ್ಥಾನದಲ್ಲಿ ದುರ್ಗಾ ದೀಪ ನಮಸ್ಕಾರ, ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆದವು.</p>.<p>ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಸಂಕ್ರಮಣ ಜಾತ್ರೆಯು ಸಂಪನ್ನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮರಿ</strong>: ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಎರಡನೇ ದಿನವೂ ದೇವಿಗೆ ವಿಶೇಷ ಪೂಜೆ ನೇರವೇರಿತು.</p>.<p>ಗುರುವಾರ ಬೆಳಿಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅರ್ಚನೆ, ನವ ಚಂಡಿಕಾ ಹೋಮ ನೆರವೇರಿತು. ದೇವಸ್ಥಾನದ ಧರ್ಮದರ್ಶಿ ಎಸ್. ರಾಮಪ್ಪ ದಂಪತಿ ಕುಟುಂಬ ಸಮೇತರಾಗಿ ಚಂಡಿಕಾ ಹವನ ಪೂರ್ಣಾಹುತಿಯಲ್ಲಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನ ನಡೆಸಿಕೊಟ್ಟರು.</p>.<p>ಇದೇ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಾಕಪ್ಪ ಕಣ್ಣೂರು ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.</p>.<p>ಜಾತ್ರೆಯ ಅಂಗವಾಗಿ ತುಮರಿಯ ಸಿಗಂದೂರೇಶ್ವರಿ ಕಲಾ ತಂಡದಿಂದ ಜನಪದ ಗೀತಾ ಗಾಯನ, ಸ್ಥಳೀಯ ಭಜನಾ ಮಂಡಳಿ ತಂಡದಿಂದ ಭಜನೆ ನಡೆಯಿತು.</p>.<p><strong>ಭಕ್ತಸಾಗರ:</strong></p>.<p>ಎರಡನೇ ದಿನದ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿ ದೇವಿಗೆ ಹೂವು, ಅಕ್ಕಿ, ಬೆಲ್ಲ ಅರ್ಪಿಸಿ ಹರಕೆ ಪೂಜೆ ಸಲ್ಲಿಸಿ, ಮುಡಿಗಂಧ ಪ್ರಸಾದ ಸ್ವೀಕರಿಸಿದರು.</p>.<p>ಮಧ್ಯಾಹ್ನ ದಾಸೋಹದಲ್ಲಿ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ಅನ್ನ ಪ್ರಸಾದ ಪಡೆದರು. ಭಕ್ತಾದಿಗಳು ಸಂಖ್ಯೆ ಹೆಚ್ಚಿದ್ದ ಹಿನ್ನೆಲೆಯಲ್ಲಿ ನಿರಂತರವಾಗಿ ಬೆಳಿಗ್ಗೆ, ಮಧ್ಯಾಹ್ನ, ಸಂಜೆ ದೇವಸ್ಥಾನ ಸಮಿತಿಯು ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಿತ್ತು.</p>.<p>ಪಟ್ಲ ಸತೀಶ್ ಶೆಟ್ಟರ ಭಾಗವತಿಕೆಯ ಪಾವಂಜೆ ಮೇಳದಿಂದ ಶ್ರೀದೇವಿ ಲಲಿತೋಪಾಖ್ಯಾನ ಯಕ್ಷಗಾನ ನೋಡಲು ಆಪಾರ ಜನಸ್ತೋಮ ಕಂಡುಬಂತು. ದೇವಸ್ಥಾನದಲ್ಲಿ ದುರ್ಗಾ ದೀಪ ನಮಸ್ಕಾರ, ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆದವು.</p>.<p>ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಸಂಕ್ರಮಣ ಜಾತ್ರೆಯು ಸಂಪನ್ನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>