<p><strong>ಶಿವಮೊಗ್ಗ</strong>: ಸಾಗರ ತಾಲ್ಲೂಕಿನ ಅಂಬಾರಗೋಡ್ಲು- ಕಳಸವಳ್ಳಿ ನಡುವೆ ನಿರ್ಮಿಸಲಾಗಿರುವ ತೂಗು ಸೇತುವೆಯನ್ನು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜುಲೈ 14ರಂದು ಲೋಕಾರ್ಪಣೆ ಮಾಡಲಿದ್ದಾರೆ.</p>.<p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ, ₹ 473 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ, 2.44 ಕಿ.ಮೀ ಉದ್ದದ ಈ ಸೇತುವೆಯು ಗುಜರಾತಿನ ಓಖಾ ನಂತರ ದೇಶದಲ್ಲಿಯೇ ಎರಡನೇ ಅತಿ ದೊಡ್ಡ ತೂಗು ಸೇತುವೆ ಆಗಿದೆ. ಉದ್ಘಾಟನೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಮಲೆನಾಡಿನ ಪ್ರಮುಖ ಯಾತ್ರಾ ಸ್ಥಳ ಸಿಗಂದೂರಿಗೆ ಈ ಸೇತುವೆ ಸಂಪರ್ಕ ಕಲ್ಪಿಸುವ ಕಾರಣಕ್ಕೆ ‘ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ’ ಎಂದು ನಾಮಕರಣ ಮಾಡಲು ಮಲೆನಾಡು ಭಾಗದ ಬಿಜೆಪಿ ಮುಖಂಡರು ಸೇರಿ ನಿರ್ಧರಿಸಿದ್ದೇವೆ. ಆ ಬಗ್ಗೆ ಎನ್ಒಸಿ ಕೊಟ್ಟು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಿ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಸಾಗರ ತಾಲ್ಲೂಕಿನ ಅಂಬಾರಗೋಡ್ಲು- ಕಳಸವಳ್ಳಿ ನಡುವೆ ನಿರ್ಮಿಸಲಾಗಿರುವ ತೂಗು ಸೇತುವೆಯನ್ನು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜುಲೈ 14ರಂದು ಲೋಕಾರ್ಪಣೆ ಮಾಡಲಿದ್ದಾರೆ.</p>.<p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ, ₹ 473 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ, 2.44 ಕಿ.ಮೀ ಉದ್ದದ ಈ ಸೇತುವೆಯು ಗುಜರಾತಿನ ಓಖಾ ನಂತರ ದೇಶದಲ್ಲಿಯೇ ಎರಡನೇ ಅತಿ ದೊಡ್ಡ ತೂಗು ಸೇತುವೆ ಆಗಿದೆ. ಉದ್ಘಾಟನೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಮಲೆನಾಡಿನ ಪ್ರಮುಖ ಯಾತ್ರಾ ಸ್ಥಳ ಸಿಗಂದೂರಿಗೆ ಈ ಸೇತುವೆ ಸಂಪರ್ಕ ಕಲ್ಪಿಸುವ ಕಾರಣಕ್ಕೆ ‘ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ’ ಎಂದು ನಾಮಕರಣ ಮಾಡಲು ಮಲೆನಾಡು ಭಾಗದ ಬಿಜೆಪಿ ಮುಖಂಡರು ಸೇರಿ ನಿರ್ಧರಿಸಿದ್ದೇವೆ. ಆ ಬಗ್ಗೆ ಎನ್ಒಸಿ ಕೊಟ್ಟು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಿ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>