<p><strong>ಶಿವಮೊಗ್ಗ:</strong> ‘ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ನಡುವೆ, ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ನೂತನ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಭಾನುವಾರ ಸಾವಿರಾರು ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು.</p>.<p>ಸಿಗಂದೂರು ಸೇತುವೆ ಜುಲೈ 14ರಂದು ಉದ್ಘಾಟನೆಯಾದ ಬಳಿಕ ಇದೇ ಮೊದಲ ವಾರಾಂತ್ಯ ಆಗಿರುವುದರಿಂದ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆಯನ್ನು ಕಣ್ತುಂಬಿಕೊಂಡು, ಸಿಗಂದೂರಿಗೆ ಭೇಟಿ ನೀಡುತ್ತಿದ್ದಾರೆ. </p>.<p>ಸಿಗಂದೂರು ದೇವಾಲಯದ ಸಮೀಪ ಪಾರ್ಕಿಂಗ್ ಸಮಸ್ಯೆಯಿಂದ ವಾಹನ ಸವಾರರು ಪರದಾಡಿದರು. ಸಾವಿರಾರು ವಾಹನಗಳು ಅಂದಾಜು 2 ಕಿ.ಮೀ. ದೂರದವರೆಗೆ ಸಾಲುಗಟ್ಟಿ ನಿಂತಿದ್ದವು. </p>.<p>ಈ ಮೊದಲು ಲಾಂಚ್ ಸೇವೆ ಇದ್ದಾಗ, ಲಾಂಚ್ನಿಂದ ಇಳಿದ ಜನರು ಬಾಡಿಗೆ ವಾಹನಗಳ ಮೂಲಕ ದೇವಸ್ಥಾನಕ್ಕೆ ಆಗಮಿಸುತ್ತಿದ್ದರು. ಈಗ ಸೇತುವೆ ಉದ್ಘಾಟನೆ ಆಗಿರುವುದರಿಂದ ಭಕ್ತರು ಸ್ವಂತ ವಾಹನಗಳಲ್ಲಿಯೇ ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ, ವಾಹನ ದಟ್ಟಣೆ ಹೆಚ್ಚಾಗಿದೆ.</p>.<p>ಸೇತುವೆ ಮೇಲ್ಭಾಗದಲ್ಲಿ ಪ್ರವಾಸಿಗರು ಸೆಲ್ಫಿ, ಫೋಟೊಗಳನ್ನು ತೆಗೆಸಿಕೊಂಡು ಸಂಭ್ರಮಿಸಿದರು. ಕುಟುಂಬದವರು, ಸ್ನೇಹಿತರೊಂದಿಗೆ ಸಿಗಂದೂರು ದೇವಿ ಸನ್ನಿಧಿಗೆ ತೆರಳುವವರೂ ಸಹ ಸೇತುವೆ ಮೇಲೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು.</p>.<p>Highlights - 2 ಕಿ.ಮೀ.ವರೆಗೆ ಸಾಲುಗಟ್ಟಿದ್ದ ವಾಹನಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನ ಸೇತುವೆಯನ್ನು ಕಣ್ತುಂಬಿಕೊಂಡ ಪ್ರವಾಸಿಗರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ನಡುವೆ, ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ನೂತನ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಭಾನುವಾರ ಸಾವಿರಾರು ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು.</p>.<p>ಸಿಗಂದೂರು ಸೇತುವೆ ಜುಲೈ 14ರಂದು ಉದ್ಘಾಟನೆಯಾದ ಬಳಿಕ ಇದೇ ಮೊದಲ ವಾರಾಂತ್ಯ ಆಗಿರುವುದರಿಂದ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆಯನ್ನು ಕಣ್ತುಂಬಿಕೊಂಡು, ಸಿಗಂದೂರಿಗೆ ಭೇಟಿ ನೀಡುತ್ತಿದ್ದಾರೆ. </p>.<p>ಸಿಗಂದೂರು ದೇವಾಲಯದ ಸಮೀಪ ಪಾರ್ಕಿಂಗ್ ಸಮಸ್ಯೆಯಿಂದ ವಾಹನ ಸವಾರರು ಪರದಾಡಿದರು. ಸಾವಿರಾರು ವಾಹನಗಳು ಅಂದಾಜು 2 ಕಿ.ಮೀ. ದೂರದವರೆಗೆ ಸಾಲುಗಟ್ಟಿ ನಿಂತಿದ್ದವು. </p>.<p>ಈ ಮೊದಲು ಲಾಂಚ್ ಸೇವೆ ಇದ್ದಾಗ, ಲಾಂಚ್ನಿಂದ ಇಳಿದ ಜನರು ಬಾಡಿಗೆ ವಾಹನಗಳ ಮೂಲಕ ದೇವಸ್ಥಾನಕ್ಕೆ ಆಗಮಿಸುತ್ತಿದ್ದರು. ಈಗ ಸೇತುವೆ ಉದ್ಘಾಟನೆ ಆಗಿರುವುದರಿಂದ ಭಕ್ತರು ಸ್ವಂತ ವಾಹನಗಳಲ್ಲಿಯೇ ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ, ವಾಹನ ದಟ್ಟಣೆ ಹೆಚ್ಚಾಗಿದೆ.</p>.<p>ಸೇತುವೆ ಮೇಲ್ಭಾಗದಲ್ಲಿ ಪ್ರವಾಸಿಗರು ಸೆಲ್ಫಿ, ಫೋಟೊಗಳನ್ನು ತೆಗೆಸಿಕೊಂಡು ಸಂಭ್ರಮಿಸಿದರು. ಕುಟುಂಬದವರು, ಸ್ನೇಹಿತರೊಂದಿಗೆ ಸಿಗಂದೂರು ದೇವಿ ಸನ್ನಿಧಿಗೆ ತೆರಳುವವರೂ ಸಹ ಸೇತುವೆ ಮೇಲೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು.</p>.<p>Highlights - 2 ಕಿ.ಮೀ.ವರೆಗೆ ಸಾಲುಗಟ್ಟಿದ್ದ ವಾಹನಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನ ಸೇತುವೆಯನ್ನು ಕಣ್ತುಂಬಿಕೊಂಡ ಪ್ರವಾಸಿಗರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>