<p><strong>ಶಿವಮೊಗ್ಗ:</strong> ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ 15ರಷ್ಟು ಮೀಸಲಾತಿ ಕಲ್ಪಿಸುವುದು ಖಂಡನೀಯ. ಇದರ ವಿರುದ್ಧ ರಾಜ್ಯದಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಿ ರಾಜ್ಯಪಾಲರಿಗೆ ನೀಡಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ರಾಷ್ಟ್ರಭಕ್ತರ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಇಲ್ಲಿನ ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರದ ಈ ನಿರ್ಧಾರ ಜಾರಿಯಾಗಲು ಪ್ರಾಣ ಹೋದರೂ ಬಿಡುವುದಿಲ್ಲ. ಶೇ 15ರಷ್ಟು ಮೀಸಲಾತಿಗೆ ಯಾವ ಬೆಲೆಯೂ ಇಲ್ಲ. ಇದು ಕೇವಲ ಮುಸ್ಲಿಂ ಓಲೈಕೆಗಾಗಿ ನಡೆಸಿದ ಪಿತೂರಿ. ಕಳೆದ ವರ್ಷ ಮುಸ್ಲಿಮರಿಗೆ ₹900 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ₹1,300 ಕೋಟಿ ಅನುದಾನ ನೀಡಲಾಗಿದೆ. ಇದು ಖಂಡನೀಯ ಎಂದರು.</p>.<p>ಮುಸ್ಲಿಮರ ಓಲೈಕೆಯ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಈ ಮೂವರನ್ನು ಜೈಲಿಗೆ ಕಳುಹಿಸಬೇಕು. ಮಂಗಳೂರಿನಲ್ಲಿ ಕೇವಲ ಒಬ್ಬ ಮುಸ್ಲಿಂ ವ್ಯಕ್ತಿ ಹತ್ಯೆಯಾಗಿದ್ದಕ್ಕೆ ಇಡೀ ಕಾಂಗ್ರೆಸ್ ಪಟಾಲಂ ಮಂಗಳೂರಿಗೆ ದೌಡಾಯಿಸಿತ್ತು. ಆದರೆ ರಾಜ್ಯದಲ್ಲಿ ಅದಕ್ಕೂ ಮೊದಲು 15 ಹಿಂದೂಗಳ ಕೊಲೆಯಾದಾಗ ಎಲ್ಲಿ ಹೋಗಿದ್ದರು ಎಂದು ಕಿಡಿಕಾರಿದರು.</p>.<p>ಪ್ರಮುಖರಾದ ಕೆ.ಈ. ಕಾಂತೇಶ್, ಇ. ವಿಶ್ವಾಸ್, ಶೇಷಾಚಲ, ರಮೇಶ್ ಬಾಬು, ಸುವರ್ಣಾ ಶಂಕರ್, ಮೋಹನ್ ಜಾದವ್, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ ಮೊದಲಾದವರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ 15ರಷ್ಟು ಮೀಸಲಾತಿ ಕಲ್ಪಿಸುವುದು ಖಂಡನೀಯ. ಇದರ ವಿರುದ್ಧ ರಾಜ್ಯದಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಿ ರಾಜ್ಯಪಾಲರಿಗೆ ನೀಡಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ರಾಷ್ಟ್ರಭಕ್ತರ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಇಲ್ಲಿನ ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರದ ಈ ನಿರ್ಧಾರ ಜಾರಿಯಾಗಲು ಪ್ರಾಣ ಹೋದರೂ ಬಿಡುವುದಿಲ್ಲ. ಶೇ 15ರಷ್ಟು ಮೀಸಲಾತಿಗೆ ಯಾವ ಬೆಲೆಯೂ ಇಲ್ಲ. ಇದು ಕೇವಲ ಮುಸ್ಲಿಂ ಓಲೈಕೆಗಾಗಿ ನಡೆಸಿದ ಪಿತೂರಿ. ಕಳೆದ ವರ್ಷ ಮುಸ್ಲಿಮರಿಗೆ ₹900 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ₹1,300 ಕೋಟಿ ಅನುದಾನ ನೀಡಲಾಗಿದೆ. ಇದು ಖಂಡನೀಯ ಎಂದರು.</p>.<p>ಮುಸ್ಲಿಮರ ಓಲೈಕೆಯ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಈ ಮೂವರನ್ನು ಜೈಲಿಗೆ ಕಳುಹಿಸಬೇಕು. ಮಂಗಳೂರಿನಲ್ಲಿ ಕೇವಲ ಒಬ್ಬ ಮುಸ್ಲಿಂ ವ್ಯಕ್ತಿ ಹತ್ಯೆಯಾಗಿದ್ದಕ್ಕೆ ಇಡೀ ಕಾಂಗ್ರೆಸ್ ಪಟಾಲಂ ಮಂಗಳೂರಿಗೆ ದೌಡಾಯಿಸಿತ್ತು. ಆದರೆ ರಾಜ್ಯದಲ್ಲಿ ಅದಕ್ಕೂ ಮೊದಲು 15 ಹಿಂದೂಗಳ ಕೊಲೆಯಾದಾಗ ಎಲ್ಲಿ ಹೋಗಿದ್ದರು ಎಂದು ಕಿಡಿಕಾರಿದರು.</p>.<p>ಪ್ರಮುಖರಾದ ಕೆ.ಈ. ಕಾಂತೇಶ್, ಇ. ವಿಶ್ವಾಸ್, ಶೇಷಾಚಲ, ರಮೇಶ್ ಬಾಬು, ಸುವರ್ಣಾ ಶಂಕರ್, ಮೋಹನ್ ಜಾದವ್, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ ಮೊದಲಾದವರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>