<p><strong>ಶಿಕಾರಿಪುರ</strong>: ‘ಜಗತ್ತಿನಲ್ಲಿಯೇ ನಮ್ಮ ದೇಶ ಧಾರ್ಮಿಕ ಕ್ಷೇತ್ರಗಳಿಂದಾಗಿ ಮಹತ್ವ ಪಡೆದಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮುಜರಾಯಿ ಇಲಾಖೆ ಶನಿವಾರ ಆಯೋಜಿಸಿದ್ದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮದ ಪ್ರಕಾರ ಯುಗಾದಿ ಹೊಸ ವರ್ಷವಾಗಿದ್ದು, ಈ ದಿನವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನವನ್ನಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>‘ಕೋವಿಡ್ ಕಾರಣ ಎರಡು ವರ್ಷಗಳಿಂದ ಹುಚ್ಚರಾಯಸ್ವಾಮಿ ದೇವರ ಬ್ರಹ್ಮರಥೋತ್ಸವವನ್ನು ವಿಜೃಂಭ<br />ಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಏ.16ರಂದು ನಡೆಯುವ ಬ್ರಹ್ಮರಥೋತ್ಸವವನ್ನು ವಿಜೃಂಭಣೆ<br />ಯಿಂದ ಆಚರಿಸೋಣ’ ಎಂದರು.</p>.<p>ಸ್ಥಳೀಯ ಕಲಾವಿದರಿಂದ ಭಜನೆ, ಭಕ್ತಿಗೀತೆಗಳ ಗಾಯನ, ಭರತನಾಟ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಋಗ್ವೇದ ಟ್ರಸ್ಟ್ ಪದಾಧಿಕಾರಿಗಳು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು.</p>.<p>ಸಂಸದ ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ,ವಿವಿಧ ನಿಗಮ ಮಂಡಳಿ ನಿರ್ದೆಶಕರಾದ ಭದ್ರಾಪುರ ಹಾಲಪ್ಪ, ಕಬಾಡಿ ರಾಜಣ್ಣ, ಜೆ. ಸುಕೇಂದ್ರಪ್ಪ, ಹೊಸೂರು ರುದ್ರೇಶ್, ಗಾಯತ್ರಿದೇವಿ, ತಹಶೀಲ್ದಾರ್ ಎಂ.ಪಿ. ಕವಿರಾಜ್, ಉಪತಹಶೀಲ್ದಾರ್ ಮಂಜುನಾಥ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಸದಸ್ಯರಾದ ಟಿ.ಎಸ್. ಮೋಹನ್, ಗುರುರಾಜ್ ಜಗತಾಪ್, ಬೆಣ್ಣೆದೇವೇಂದ್ರ, ರೂಪಕಲಾ ಹೆಗಡೆ, ರೂಪ ಮಂಜುನಾಥ್, ದರ್ಶನ್, ಅಖಿಲ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎನ್.ವಿ.ಈರೇಶ್, ಜಿಲ್ಲಾ ನಿರ್ದೇಶಕ ಕೊಟ್ರೇಶಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ‘ಜಗತ್ತಿನಲ್ಲಿಯೇ ನಮ್ಮ ದೇಶ ಧಾರ್ಮಿಕ ಕ್ಷೇತ್ರಗಳಿಂದಾಗಿ ಮಹತ್ವ ಪಡೆದಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮುಜರಾಯಿ ಇಲಾಖೆ ಶನಿವಾರ ಆಯೋಜಿಸಿದ್ದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮದ ಪ್ರಕಾರ ಯುಗಾದಿ ಹೊಸ ವರ್ಷವಾಗಿದ್ದು, ಈ ದಿನವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನವನ್ನಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>‘ಕೋವಿಡ್ ಕಾರಣ ಎರಡು ವರ್ಷಗಳಿಂದ ಹುಚ್ಚರಾಯಸ್ವಾಮಿ ದೇವರ ಬ್ರಹ್ಮರಥೋತ್ಸವವನ್ನು ವಿಜೃಂಭ<br />ಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಏ.16ರಂದು ನಡೆಯುವ ಬ್ರಹ್ಮರಥೋತ್ಸವವನ್ನು ವಿಜೃಂಭಣೆ<br />ಯಿಂದ ಆಚರಿಸೋಣ’ ಎಂದರು.</p>.<p>ಸ್ಥಳೀಯ ಕಲಾವಿದರಿಂದ ಭಜನೆ, ಭಕ್ತಿಗೀತೆಗಳ ಗಾಯನ, ಭರತನಾಟ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಋಗ್ವೇದ ಟ್ರಸ್ಟ್ ಪದಾಧಿಕಾರಿಗಳು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು.</p>.<p>ಸಂಸದ ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ,ವಿವಿಧ ನಿಗಮ ಮಂಡಳಿ ನಿರ್ದೆಶಕರಾದ ಭದ್ರಾಪುರ ಹಾಲಪ್ಪ, ಕಬಾಡಿ ರಾಜಣ್ಣ, ಜೆ. ಸುಕೇಂದ್ರಪ್ಪ, ಹೊಸೂರು ರುದ್ರೇಶ್, ಗಾಯತ್ರಿದೇವಿ, ತಹಶೀಲ್ದಾರ್ ಎಂ.ಪಿ. ಕವಿರಾಜ್, ಉಪತಹಶೀಲ್ದಾರ್ ಮಂಜುನಾಥ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಸದಸ್ಯರಾದ ಟಿ.ಎಸ್. ಮೋಹನ್, ಗುರುರಾಜ್ ಜಗತಾಪ್, ಬೆಣ್ಣೆದೇವೇಂದ್ರ, ರೂಪಕಲಾ ಹೆಗಡೆ, ರೂಪ ಮಂಜುನಾಥ್, ದರ್ಶನ್, ಅಖಿಲ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎನ್.ವಿ.ಈರೇಶ್, ಜಿಲ್ಲಾ ನಿರ್ದೇಶಕ ಕೊಟ್ರೇಶಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>