ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಹುಲ್ಮಾರ್ ಮಹೇಶ್ ಮಾತನಾಡಿ, ‘ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ನಡೆಯುವ ಮಹೋತ್ಸವವಾಗಿದೆ. ಪಟ್ಟಣದ ನಾಗರಿಕರು ಜಾತ್ರಾ ಮಹೋತ್ಸವ ಯಶಸ್ವಿ
ಗೊಳಿಸಲು ಸಹಕಾರ ನೀಡಬೇಕು. ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯುವ ಕಾರ್ಯಗಳಲ್ಲಿ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು. ‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ತಾಲ್ಲೂಕು ಕುರುಬ ಸಮಾಜ ಅಧ್ಯಕ್ಷ ಕಬಾಡಿ ರಾಜಣ್ಣ, ಮಾರಿಕಾಂಬಾ ದೇವಸ್ಥಾನ ಸಮಿತಿ ಪದಾಧಿಕಾರಿಗಳಾದ ಹೊಲಗಾವಲು ಮಲ್ಲಪ್ಪ, ಪಾತ್ರೆ ರಾಜಪ್ಪ, ಪಾರಿವಾಳ ಶಿವಶಂಕರಪ್ಪ, ಶಿವನಗೌಡ್ರು, ಪರಮೇಶ್ವರಪ್ಪ, ವಿವಿಧ ಸಮಾಜದ ಮುಖಂಡರು ಇದ್ದರು.