<p><strong>ಶಿವಮೊಗ್ಗ:</strong> ಈಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ ಗುಂಪೊಂದು ಕೂಗಾಡಿ ಬೆದರಿಕೆ ಹಾಕಿದೆ.ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ನಾವು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಗೃಹ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ನಮಗೆ ರಕ್ಷಣೆ ಯಾವಾಗ ಸಿಗುತ್ತದೆ’ ಎಂದು ಪ್ರಶ್ನಿಸಿದ್ದಾರೆ.</p>.<p>ಇದೇ ವೇಳೆ ಮೆಗ್ಗಾನ್ ಆಸ್ಪತ್ರೆಗೆ ತೆರಳಿದ್ದ ಅಶ್ವಿನಿ, ಗುಂಪಿನಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.</p>.<p>‘ಆಜಾದ್ ನಗರದಲ್ಲಿ ನಡೆದ ಕಾರು ಜಖಂ ಪ್ರಕರಣದಲ್ಲಿ ಎಫ್ಐಆರ್ ದಾಖಲಾದರೂ ಅಶ್ವಿನಿ ವಿರುದ್ಧ ಕ್ರಮ ಕೈಗೊಂಡಿಲ್ಲ. ಅವರು ಸಾರ್ವಜನಿಕವಾಗಿ ಓಡಾಡಿಕೊಂಡೇ ಇದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಮುಸ್ಲಿಂ ಮುಖಂಡರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ಎಸ್.ಪಿ, ‘ಪ್ರಕರಣಗಳ ಗಂಭೀರತೆ ಆಧರಿಸಿ ತಪ್ಪು ಮಾಡಿದ ಎಲ್ಲರ ವಿರುದ್ಧವೂ ನಿಶ್ಚಿತವಾಗಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p><strong>‘ಗೂಂಡಗಳಿಗೆ ಪೊಲೀಸರು, ಸರ್ಕಾರದ ಭಯ ಇಲ್ಲದಂತಾಗಿದೆ’</strong><br />ಕೆಲವು ಮುಸ್ಲಿಂ ಗೂಂಡಾಗಳಿಗೆ ಸರ್ಕಾರ ಮತ್ತು ಪೊಲೀಸರ ಭಯ ಇಲ್ಲದಂತಾಗಿದೆ. ಶಿವಮೊಗ್ಗದಲ್ಲಿ ಪಿಎಫ್ಐ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎಂಬುದನ್ನು ಪೊಲೀಸರು ಪತ್ತೆ ಮಾಡಬೇಕಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.</p>.<p>ನಗರದಲ್ಲಿ ನಡೆದ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಲ್ಲೆಯನ್ನು ಯಾರು ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದರು.</p>.<p>**<br />ಸಾರ್ವಜನಿಕರಲ್ಲಿ ಆತಂಕ ಬೇಡ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ಇರಿಸಿದ್ದೇವೆ. ಬೆಳಗಿನಜಾವ ಹಾಗೂ ತಡರಾತ್ರಿ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ.<br /><em><strong>–ಜಿ.ಕೆ. ಮಿಥುನ್ಕುಮಾರ್, ಶಿವಮೊಗ್ಗ ಎಸ್.ಪಿ</strong></em></p>.<p><strong>ಓದಿ...<a href="https://www.prajavani.net/karnataka-news/assault-case-tense-situation-at-shivamogga-three-arrested-983355.html" target="_blank">ಹಳೆಯ ದ್ವೇಷ: ಶಿವಮೊಗ್ಗದಲ್ಲಿ ಯುವಕನ ಮೇಲೆ ಹಲ್ಲೆ, ಮೂವರ ಬಂಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಈಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ ಗುಂಪೊಂದು ಕೂಗಾಡಿ ಬೆದರಿಕೆ ಹಾಕಿದೆ.ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ನಾವು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಗೃಹ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ನಮಗೆ ರಕ್ಷಣೆ ಯಾವಾಗ ಸಿಗುತ್ತದೆ’ ಎಂದು ಪ್ರಶ್ನಿಸಿದ್ದಾರೆ.</p>.<p>ಇದೇ ವೇಳೆ ಮೆಗ್ಗಾನ್ ಆಸ್ಪತ್ರೆಗೆ ತೆರಳಿದ್ದ ಅಶ್ವಿನಿ, ಗುಂಪಿನಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.</p>.<p>‘ಆಜಾದ್ ನಗರದಲ್ಲಿ ನಡೆದ ಕಾರು ಜಖಂ ಪ್ರಕರಣದಲ್ಲಿ ಎಫ್ಐಆರ್ ದಾಖಲಾದರೂ ಅಶ್ವಿನಿ ವಿರುದ್ಧ ಕ್ರಮ ಕೈಗೊಂಡಿಲ್ಲ. ಅವರು ಸಾರ್ವಜನಿಕವಾಗಿ ಓಡಾಡಿಕೊಂಡೇ ಇದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಮುಸ್ಲಿಂ ಮುಖಂಡರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ಎಸ್.ಪಿ, ‘ಪ್ರಕರಣಗಳ ಗಂಭೀರತೆ ಆಧರಿಸಿ ತಪ್ಪು ಮಾಡಿದ ಎಲ್ಲರ ವಿರುದ್ಧವೂ ನಿಶ್ಚಿತವಾಗಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p><strong>‘ಗೂಂಡಗಳಿಗೆ ಪೊಲೀಸರು, ಸರ್ಕಾರದ ಭಯ ಇಲ್ಲದಂತಾಗಿದೆ’</strong><br />ಕೆಲವು ಮುಸ್ಲಿಂ ಗೂಂಡಾಗಳಿಗೆ ಸರ್ಕಾರ ಮತ್ತು ಪೊಲೀಸರ ಭಯ ಇಲ್ಲದಂತಾಗಿದೆ. ಶಿವಮೊಗ್ಗದಲ್ಲಿ ಪಿಎಫ್ಐ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎಂಬುದನ್ನು ಪೊಲೀಸರು ಪತ್ತೆ ಮಾಡಬೇಕಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.</p>.<p>ನಗರದಲ್ಲಿ ನಡೆದ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಲ್ಲೆಯನ್ನು ಯಾರು ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದರು.</p>.<p>**<br />ಸಾರ್ವಜನಿಕರಲ್ಲಿ ಆತಂಕ ಬೇಡ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ಇರಿಸಿದ್ದೇವೆ. ಬೆಳಗಿನಜಾವ ಹಾಗೂ ತಡರಾತ್ರಿ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ.<br /><em><strong>–ಜಿ.ಕೆ. ಮಿಥುನ್ಕುಮಾರ್, ಶಿವಮೊಗ್ಗ ಎಸ್.ಪಿ</strong></em></p>.<p><strong>ಓದಿ...<a href="https://www.prajavani.net/karnataka-news/assault-case-tense-situation-at-shivamogga-three-arrested-983355.html" target="_blank">ಹಳೆಯ ದ್ವೇಷ: ಶಿವಮೊಗ್ಗದಲ್ಲಿ ಯುವಕನ ಮೇಲೆ ಹಲ್ಲೆ, ಮೂವರ ಬಂಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>