ಲೇಖಕ ಡಾ.ಸರ್ಫ್ರಾಜ್ ಚಂದ್ರಗುತ್ತಿ, ‘ವರ್ತಮಾನದ ಬಿಕ್ಕಟ್ಟುಗಳಿಗೆ ಲೋಹಿಯಾ, ಗಾಂಧಿ, ಅಂಬೇಡ್ಕರ್, ಕುವೆಂಪು ಅವರ ಚಿಂತನೆಗಳನ್ನು ಒಗ್ಗೂಡಿಸಿ ತಮ್ಮದೇ ಆದ ಪರಿಭಾಷೆಯಲ್ಲಿ ಪ್ರತಿಕ್ರಿಯಿಸುವ ಮೂಲಕ ವೈಚಾರಿಕ ವಲಯಕ್ಕೆ ಹೊಸ ಭರವಸೆ ಮೂಡಿಸಿದ್ದರು’ ಎಂದು ಹೇಳಿದರು. ಪತ್ರಕರ್ತ ಶೃಂಗೇಶ್, ದಲಿತ ಸಂಘರ್ಷ ಸಮಿತಿಯ ಪರಮೇಶ್ವರ ದೂಗೂರು, ನಗರಸಭೆ ಮಾಜಿ ಅಧ್ಯಕ್ಷ ತೀ.ನ. ಶ್ರೀನಿವಾಸ್, ರಂಗ ನಟಿ ಎಂ.ವಿ. ಪ್ರತಿಭಾ ಮಾತನಾಡಿದರು.