<p><strong>ಶಿವಮೊಗ್ಗ</strong>: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಪ್ರಕರಣಕ್ಜೆ ಸಂಬಂಧಿಸಿದಂತೆ 21 ಕೈದಿಗಳ ವಿರುದ್ಧ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಆರ್.ಅನಿತಾ ಸೋಮವಾರ ಇಲ್ಲಿನ ತುಂಗಾ ನಗರ ಠಾಣೆಯಲ್ಲಿ ಎಫ್ಐಐಆರ್ ದಾಖಲಿಸಿದ್ದಾರೆ.</p>.<p>ಬೀಡಿ ಪೂರೈಸುವಂತೆ ಒತ್ತಾಯಿಸಿ ಕಾರಾಗೃಹದ ಕೈದಿಗಳು ಸೆ.2ರಂದು ಪ್ರತಿಭಟನೆ ನಡೆಸಿದ್ದರು. ಅದು ಈಗ ಉಗ್ರ ರೂಪ <br>ತಾಳಿದೆ.</p>.<p>ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಸಹ ಅರೋಪಿಗಳಲ್ಲಿ ಇಬ್ಬರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆಗಿನಿಂದಲೂ ಇಲ್ಲಿ ಬಿಗಿ ಕ್ರಮ ಕೈಗೊಂಡಿದ್ದು, ಇದೂ ಕೂಡ ಕೈದಿಗಳ ಪ್ರತಿಭಟನೆಗೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಪ್ರಕರಣಕ್ಜೆ ಸಂಬಂಧಿಸಿದಂತೆ 21 ಕೈದಿಗಳ ವಿರುದ್ಧ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಆರ್.ಅನಿತಾ ಸೋಮವಾರ ಇಲ್ಲಿನ ತುಂಗಾ ನಗರ ಠಾಣೆಯಲ್ಲಿ ಎಫ್ಐಐಆರ್ ದಾಖಲಿಸಿದ್ದಾರೆ.</p>.<p>ಬೀಡಿ ಪೂರೈಸುವಂತೆ ಒತ್ತಾಯಿಸಿ ಕಾರಾಗೃಹದ ಕೈದಿಗಳು ಸೆ.2ರಂದು ಪ್ರತಿಭಟನೆ ನಡೆಸಿದ್ದರು. ಅದು ಈಗ ಉಗ್ರ ರೂಪ <br>ತಾಳಿದೆ.</p>.<p>ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಸಹ ಅರೋಪಿಗಳಲ್ಲಿ ಇಬ್ಬರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆಗಿನಿಂದಲೂ ಇಲ್ಲಿ ಬಿಗಿ ಕ್ರಮ ಕೈಗೊಂಡಿದ್ದು, ಇದೂ ಕೂಡ ಕೈದಿಗಳ ಪ್ರತಿಭಟನೆಗೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>