<p><strong>ಸೊರಬ:</strong> ಲಾರಿ ಹರಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ತಾಲ್ಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.</p>.<p>ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೊಹಮ್ಮದ್ ಆಹಿಲ್ ಖಾನ್ (3) ಮೃತ ಬಾಲಕ. ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ.</p>.<p>ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಘಟನಾ ಸ್ಥಳದಲ್ಲಿ ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸಿದ್ದರು.</p>.<p>ಫರೀನಾ ಬೇಗಂ ಹೆರಿಗೆಗೆಂದು ಕೆರೆಕೊಪ್ಪದ ತವರು ಮನೆಗೆ ಬಂದಿದ್ದರು. ಅಜ್ಜಿ ನಸೀಮಾ ಬಾನು ಮಗುವನ್ನು ಅಂಗನವಾಡಿಯಿಂದ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಅಜ್ಜಿಯನ್ನು ಕಂಡ ಮಗು ದಿಢೀರ್ ರಸ್ತೆ ಬದಿ ಓಡಿ ಬಂದಿದೆ. ಈ ವೇಳೆ ಬರುತ್ತಿದ್ದ ಲಾರಿಗೆ ಸಿಲುಕಿ ಮೃತಪಟ್ಟಿದೆ. ಮಗುವಿನ ತಂದೆ ಉದ್ಯೋಗ ನಿಮಿತ್ತ ದುಬೈನಲ್ಲಿದ್ದಾರೆ.</p>.<p>ರಸ್ತೆ ಬದಿಯಲ್ಲಿದೆ ಅಂಗನವಾಡಿ:</p>.<p>ಸೊರಬ- ಬನವಾಸಿ ಮಾರ್ಗದ ಕೆರೆಕೊಪ್ಪ ಗ್ರಾಮದಲ್ಲಿ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದೆ. ಅಂಗನವಾಡಿ ಕೇಂದ್ರವು ರಸ್ತೆ ಪಕ್ಕದಲ್ಲಿರುವುದೇ ಘಟನೆಗೆ ಕಾರಣವಾಗಿದೆ. ರಾಜ್ಯ ಹೆದ್ದಾರಿ ಆಗಿರುವ ಈ ಮಾರ್ಗದಲ್ಲಿನ ಅಂಗನವಾಡಿ ಸ್ಥಳಾಂತರ ಮಾಡಬೇಕಿದೆ. ನೂತನ ಅಂಗನವಾಡಿ ಕಟ್ಟಡವನ್ನು ಗ್ರಾಮದ ಒಳ ಭಾಗದಲ್ಲಿ ನಿರ್ಮಿಸಲು ಗ್ರಾಮಸ್ಥರು ನಿವೇಶನ ನೀಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ:</strong> ಲಾರಿ ಹರಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ತಾಲ್ಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.</p>.<p>ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೊಹಮ್ಮದ್ ಆಹಿಲ್ ಖಾನ್ (3) ಮೃತ ಬಾಲಕ. ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ.</p>.<p>ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಘಟನಾ ಸ್ಥಳದಲ್ಲಿ ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸಿದ್ದರು.</p>.<p>ಫರೀನಾ ಬೇಗಂ ಹೆರಿಗೆಗೆಂದು ಕೆರೆಕೊಪ್ಪದ ತವರು ಮನೆಗೆ ಬಂದಿದ್ದರು. ಅಜ್ಜಿ ನಸೀಮಾ ಬಾನು ಮಗುವನ್ನು ಅಂಗನವಾಡಿಯಿಂದ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಅಜ್ಜಿಯನ್ನು ಕಂಡ ಮಗು ದಿಢೀರ್ ರಸ್ತೆ ಬದಿ ಓಡಿ ಬಂದಿದೆ. ಈ ವೇಳೆ ಬರುತ್ತಿದ್ದ ಲಾರಿಗೆ ಸಿಲುಕಿ ಮೃತಪಟ್ಟಿದೆ. ಮಗುವಿನ ತಂದೆ ಉದ್ಯೋಗ ನಿಮಿತ್ತ ದುಬೈನಲ್ಲಿದ್ದಾರೆ.</p>.<p>ರಸ್ತೆ ಬದಿಯಲ್ಲಿದೆ ಅಂಗನವಾಡಿ:</p>.<p>ಸೊರಬ- ಬನವಾಸಿ ಮಾರ್ಗದ ಕೆರೆಕೊಪ್ಪ ಗ್ರಾಮದಲ್ಲಿ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದೆ. ಅಂಗನವಾಡಿ ಕೇಂದ್ರವು ರಸ್ತೆ ಪಕ್ಕದಲ್ಲಿರುವುದೇ ಘಟನೆಗೆ ಕಾರಣವಾಗಿದೆ. ರಾಜ್ಯ ಹೆದ್ದಾರಿ ಆಗಿರುವ ಈ ಮಾರ್ಗದಲ್ಲಿನ ಅಂಗನವಾಡಿ ಸ್ಥಳಾಂತರ ಮಾಡಬೇಕಿದೆ. ನೂತನ ಅಂಗನವಾಡಿ ಕಟ್ಟಡವನ್ನು ಗ್ರಾಮದ ಒಳ ಭಾಗದಲ್ಲಿ ನಿರ್ಮಿಸಲು ಗ್ರಾಮಸ್ಥರು ನಿವೇಶನ ನೀಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>