ಪೇಜ್ ಪ್ರಮುಖರಿಗೆ ಪಕ್ಷದ ಚಿಹ್ನೆ ಇರುವ ಗುರುತಿನ ಚೀಟಿಯಲ್ಲಿ ಹೆಸರು, ವಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ನಮೂದಿಸಿದ್ದು, ಬಿಜೆಪಿ ಸಭೆ ಸಮಾರಂಭಗಳಲ್ಲಿ ಭಾಗವಹಿಸಲು ಅವರಿಗೆ ಮುಕ್ತವಾಗಿ ಅವಕಾಶ ಇರುತ್ತದೆ. ಬೆಳಿಗ್ಗೆ 10ಕ್ಕೆ ರಂಗನಾಥ ಸ್ವಾಮಿ ದೇವಸ್ಥಾನದಿಂದ ಬೈಕ್ ರ್ಯಾಲಿ ನಡೆಯಲಿದ್ದು, ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಮೆರವಣಿಗೆ ಮೂಲಕ ಸಭಾಂಗಣಕ್ಕೆ
ಕರೆತರಲಾಗುವುದು ಎಂದು ಹೇಳಿದರು.