ಪ್ರಕರಣ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಅಭಿನವ್ ಖರೆ ಆನೆದಂತ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಹೆಚ್ಚುವರಿ ಎಸ್ಪಿ ಮುತ್ತುರಾಜ್ ಅವರಿಗೆ ಸೂಚಿಸಿದ್ದರು.2011ರಲ್ಲಿ ಕಚೇರಿ ನವೀಕರಣಕ್ಕಾಗಿ ಗೋಡೆಯಿಂದ ತೆಗೆಯಲಾಗಿತ್ತು. ನಂತರ ಈ ಕುರಿತು ಮಾಹಿತಿ ಇಲ್ಲ ಎಂದು ಬಹುತೇಕ ಸಿಬ್ಬಂದಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಮುತ್ತುರಾಜ್ ವರದಿ ನೀಡಿದ್ದರು.