<p><strong>ತೀರ್ಥಹಳ್ಳಿ:</strong> ‘ಬುದ್ಧಿಮಾಂದ್ಯ ಮಕ್ಕಳ ಲಾಲನೆ- ಪಾಲನೆ ಮಾಡುವುದು ಪಾಲಕರಿಗೆ ನಿತ್ಯವೂ ಸವಾಲಿನ ಕೆಲಸವಾಗಿದೆ. ಅವರನ್ನು ಸಹಜ ಮಕ್ಕಳಂತೆ ಪರಿವರ್ತಿಸಲು ವಿಶೇಷ ಮಕ್ಕಳ ವಸತಿ ಶಾಲೆ ಆರಂಭಿಸುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.</p>.<p>ಇಲ್ಲಿನ ಸೊಪ್ಪುಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ಭೇಟಿ ನೀಡಿ ವಿವಿಧ ದೈಹಿಕ, ಮಾನಸಿಕ ಸಮಸ್ಯೆಗಳಿಗೆ ತುತ್ತಾದ ಮಕ್ಕಳ ಪೋಷಕರೊಂದಿಗೆ ಚರ್ಚೆ ನಡೆಸಿದರು.</p>.<p>‘ವಿಶೇಷ ಮಕ್ಕಳು ಇರುವ ಕಾರಣದಿಂದ ಬಾಡಿಗೆ ಮನೆಗಳಿಗೆ ಪರದಾಡಬೇಕಿದೆ. ವಸತಿ ಶಾಲೆ ಆರಂಭಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ’ ಎಂದು ಪೋಷಕರು ಸಚಿವರ ಗಮನ ಸೆಳೆದರು.</p>.<p>‘ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕು. ಶಾಲೆ ತೆರೆಯುವ ಸಂಬಂಧ ಸಂಪುಟ ಸಭೆಯಲ್ಲಿ ವಿಷಯ ಮಂಡಿಸುತ್ತೇನೆ. ಕಟ್ಟಡಗಳನ್ನು ಸಾರ್ವಜನಿಕ ದೇಣಿಗೆಯಿಂದ ನಿರ್ಮಿಸಲಾಗುತ್ತದೆ. ಶಾಲೆ ತೆರೆಯಲು ಸೂಕ್ತವಾದ ಸ್ಥಳ ಪರಿಶೀಲಿಸಿ ಇಲಾಖೆಗೆ ವರದಿ ಸಲ್ಲಿಸುವಂತೆ’ ಬಿಇಒ ವೈ.ಗಣೇಶ್ ಅವರಿಗೆ ಸೂಚಿಸಿದರು.</p>.<p>‘ಶಿಕ್ಷಕರ ಕುಮಾರ್ ಎಚ್.ಸಿ. ನಿವೃತ್ತಿಯಾಗುತ್ತಿದ್ದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ. ಇಲಾಖೆಯಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯ, ಭೌತಿಕ ಸಾಮಗ್ರಿ ಕಲ್ಪಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಮಾಜಿ ಸಚಿವ ಕಿಮ್ಮನೆ ರತ್ನಾಕರ, ಎಂಎಡಿಬಿ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಮುಖಂಡರಾದ ಮುಡುಬ ರಾಘವೇಂದ್ರ, ಆದರ್ಶ ಹುಂಚದಕಟ್ಟೆ, ಅಮರನಾಥ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ‘ಬುದ್ಧಿಮಾಂದ್ಯ ಮಕ್ಕಳ ಲಾಲನೆ- ಪಾಲನೆ ಮಾಡುವುದು ಪಾಲಕರಿಗೆ ನಿತ್ಯವೂ ಸವಾಲಿನ ಕೆಲಸವಾಗಿದೆ. ಅವರನ್ನು ಸಹಜ ಮಕ್ಕಳಂತೆ ಪರಿವರ್ತಿಸಲು ವಿಶೇಷ ಮಕ್ಕಳ ವಸತಿ ಶಾಲೆ ಆರಂಭಿಸುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.</p>.<p>ಇಲ್ಲಿನ ಸೊಪ್ಪುಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ಭೇಟಿ ನೀಡಿ ವಿವಿಧ ದೈಹಿಕ, ಮಾನಸಿಕ ಸಮಸ್ಯೆಗಳಿಗೆ ತುತ್ತಾದ ಮಕ್ಕಳ ಪೋಷಕರೊಂದಿಗೆ ಚರ್ಚೆ ನಡೆಸಿದರು.</p>.<p>‘ವಿಶೇಷ ಮಕ್ಕಳು ಇರುವ ಕಾರಣದಿಂದ ಬಾಡಿಗೆ ಮನೆಗಳಿಗೆ ಪರದಾಡಬೇಕಿದೆ. ವಸತಿ ಶಾಲೆ ಆರಂಭಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ’ ಎಂದು ಪೋಷಕರು ಸಚಿವರ ಗಮನ ಸೆಳೆದರು.</p>.<p>‘ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕು. ಶಾಲೆ ತೆರೆಯುವ ಸಂಬಂಧ ಸಂಪುಟ ಸಭೆಯಲ್ಲಿ ವಿಷಯ ಮಂಡಿಸುತ್ತೇನೆ. ಕಟ್ಟಡಗಳನ್ನು ಸಾರ್ವಜನಿಕ ದೇಣಿಗೆಯಿಂದ ನಿರ್ಮಿಸಲಾಗುತ್ತದೆ. ಶಾಲೆ ತೆರೆಯಲು ಸೂಕ್ತವಾದ ಸ್ಥಳ ಪರಿಶೀಲಿಸಿ ಇಲಾಖೆಗೆ ವರದಿ ಸಲ್ಲಿಸುವಂತೆ’ ಬಿಇಒ ವೈ.ಗಣೇಶ್ ಅವರಿಗೆ ಸೂಚಿಸಿದರು.</p>.<p>‘ಶಿಕ್ಷಕರ ಕುಮಾರ್ ಎಚ್.ಸಿ. ನಿವೃತ್ತಿಯಾಗುತ್ತಿದ್ದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ. ಇಲಾಖೆಯಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯ, ಭೌತಿಕ ಸಾಮಗ್ರಿ ಕಲ್ಪಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಮಾಜಿ ಸಚಿವ ಕಿಮ್ಮನೆ ರತ್ನಾಕರ, ಎಂಎಡಿಬಿ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಮುಖಂಡರಾದ ಮುಡುಬ ರಾಘವೇಂದ್ರ, ಆದರ್ಶ ಹುಂಚದಕಟ್ಟೆ, ಅಮರನಾಥ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>