<p><strong>ಶಿವಮೊಗ್ಗ:</strong> ‘ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ಹೆಚ್ಚುವರಿ ಒಂದು ವಿಶೇಷ ರೈಲು ಗಾಡಿ ಮೂರು ಬಾರಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ವಿಶೇಷ ರೈಲಿನ ಸಮಯ: ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ನಡುವೆ ಸೆ.19, 26 ಮತ್ತು ಅ.3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.</p>.<p>ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ನಡುವೆ ಸೆ. 20, 27 ಮತ್ತು ಅ. 4ರಂದು ತಾಳಗುಪ್ಪದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.</p>.<p><strong>ನಿಲುಗಡೆ:</strong> ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.</p>.<p><strong>ಬೋಗಿಗಳು:</strong> ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ 1 ಎಸಿ ಟು-ಟಯರ್, 2 ಎಸಿ ತ್ರೀ-ಟಯರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ದ್ವಿತೀಯ ದರ್ಜೆ ಲಗೇಜ್-ಕಂ-ಬ್ರೇಕ್ ವ್ಯಾನ್ಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ಹೆಚ್ಚುವರಿ ಒಂದು ವಿಶೇಷ ರೈಲು ಗಾಡಿ ಮೂರು ಬಾರಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ವಿಶೇಷ ರೈಲಿನ ಸಮಯ: ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ನಡುವೆ ಸೆ.19, 26 ಮತ್ತು ಅ.3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.</p>.<p>ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ನಡುವೆ ಸೆ. 20, 27 ಮತ್ತು ಅ. 4ರಂದು ತಾಳಗುಪ್ಪದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.</p>.<p><strong>ನಿಲುಗಡೆ:</strong> ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.</p>.<p><strong>ಬೋಗಿಗಳು:</strong> ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ 1 ಎಸಿ ಟು-ಟಯರ್, 2 ಎಸಿ ತ್ರೀ-ಟಯರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ದ್ವಿತೀಯ ದರ್ಜೆ ಲಗೇಜ್-ಕಂ-ಬ್ರೇಕ್ ವ್ಯಾನ್ಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>