<p><strong>ರಿಪ್ಪನ್ಪೇಟೆ:</strong> ‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಸಂದರ್ಭದಲ್ಲಿ ಅಧ್ಯಯನಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ’ ಎಂದು ಹಿರಿಯ ತಜ್ಞ ವೈದ್ಯ ಜೆ.ಡಿ.ನಾರಾಯಣಪ್ಪ ಹೇಳಿದರು. </p>.<p>‘ಶಬ್ಧ ಮಾಲಿನ್ಯವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರೌಢ, ಪದವಿ ಹಾಗೂ ವೃತ್ತಿಪರ ಕೋರ್ಸ್ಗಳ ಜೊತೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕಾಲಘಟ್ಟದಲ್ಲಿ ಪೋಷಕರು ಸೂಕ್ಷ್ಮ ವಿಚಾರಗಳನ್ನು ಗಮನಿಸಬೇಕು’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<p>‘ಗ್ರಾಮ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದ ಮೆರವಣಿಗೆಗಳಲ್ಲಿ ಅಳವಡಿಸುವ ಧ್ವನಿವರ್ಧಕಗಳ ಅಬ್ಬರಕ್ಕೆ ಪರೀಕ್ಷಾ ಅವಧಿಯಲ್ಲಿ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಟಿವಿಯಿಂದ ದೂರ ಇರಬೇಕು’ ಎಂದು ಸಲಹೆ ನೀಡಿದರು. </p>.<p>ಶಬ್ಧಮಾಲಿನ್ಯ ಕಡಿಮೆ ಮಾಡುವುದರಿಂದ ಮಾನಸಿಕ ಒತ್ತಡ, ಆತಂಕ ದೂರ ಮಾಡಬಹುದು. ಪರೀಕ್ಷಾ ಅವಧಿಯಲ್ಲಿ ನಾಗರಿಕರು ಸ್ವಯಂ ನಿಯಂತ್ರಣಕ್ಕೆ ಒಳಪಡುವುದು ಅತ್ಯವಶ್ಯ. ಜಾಗೃತಿ ಅಭಿಯಾನದ ಮೂಲಕ ‘ಪರೀಕ್ಷಾ ಸಮಯ – ಶಾಂತತೆ ನಮ್ಮ ಕರ್ತವ್ಯ’ ಎಂಬ ಘೋಷವಾಕ್ಯದ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಬೇಕು. ವಿದ್ಯಾರ್ಥಿಗಳ ಯಶಸ್ಸು ಸಮಾಜದ ಸಹಕಾರವನ್ನೂ ಅವಲಂಬಿಸಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಸಂದರ್ಭದಲ್ಲಿ ಅಧ್ಯಯನಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ’ ಎಂದು ಹಿರಿಯ ತಜ್ಞ ವೈದ್ಯ ಜೆ.ಡಿ.ನಾರಾಯಣಪ್ಪ ಹೇಳಿದರು. </p>.<p>‘ಶಬ್ಧ ಮಾಲಿನ್ಯವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರೌಢ, ಪದವಿ ಹಾಗೂ ವೃತ್ತಿಪರ ಕೋರ್ಸ್ಗಳ ಜೊತೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕಾಲಘಟ್ಟದಲ್ಲಿ ಪೋಷಕರು ಸೂಕ್ಷ್ಮ ವಿಚಾರಗಳನ್ನು ಗಮನಿಸಬೇಕು’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<p>‘ಗ್ರಾಮ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದ ಮೆರವಣಿಗೆಗಳಲ್ಲಿ ಅಳವಡಿಸುವ ಧ್ವನಿವರ್ಧಕಗಳ ಅಬ್ಬರಕ್ಕೆ ಪರೀಕ್ಷಾ ಅವಧಿಯಲ್ಲಿ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಟಿವಿಯಿಂದ ದೂರ ಇರಬೇಕು’ ಎಂದು ಸಲಹೆ ನೀಡಿದರು. </p>.<p>ಶಬ್ಧಮಾಲಿನ್ಯ ಕಡಿಮೆ ಮಾಡುವುದರಿಂದ ಮಾನಸಿಕ ಒತ್ತಡ, ಆತಂಕ ದೂರ ಮಾಡಬಹುದು. ಪರೀಕ್ಷಾ ಅವಧಿಯಲ್ಲಿ ನಾಗರಿಕರು ಸ್ವಯಂ ನಿಯಂತ್ರಣಕ್ಕೆ ಒಳಪಡುವುದು ಅತ್ಯವಶ್ಯ. ಜಾಗೃತಿ ಅಭಿಯಾನದ ಮೂಲಕ ‘ಪರೀಕ್ಷಾ ಸಮಯ – ಶಾಂತತೆ ನಮ್ಮ ಕರ್ತವ್ಯ’ ಎಂಬ ಘೋಷವಾಕ್ಯದ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಬೇಕು. ವಿದ್ಯಾರ್ಥಿಗಳ ಯಶಸ್ಸು ಸಮಾಜದ ಸಹಕಾರವನ್ನೂ ಅವಲಂಬಿಸಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>