<p><strong>ರಿಪ್ಪನ್ಪೇಟೆ:</strong>ಶಿವಮೊಗ್ಗದ ಜೆಎನ್ಇ ಕಾಲೇಜಿನಲ್ಲಿ ದ್ವಿತೀಯ ಪಿಯು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಂಕ ಗ್ರಾಮದ ವಿದ್ಯಾರ್ಥಿಅರುಣ್ ಕುಮಾರ್ (18) ಶವ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.</p>.<p>ಶೆಟ್ಟಿಕೆರೆ ಬಸವಾಪುರ ನಡುವಿನ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ.</p>.<p>ಶಿವಮೊಗ್ಗದಲ್ಲಿ ಹಾಸ್ಟೆಲ್ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಅರುಣ್ಕುಮಾರ್.</p>.<p>‘ಎರಡು ದಿನಗಳಿಂದ ಮನೆಯವರ ದೂರವಾಣಿ ಕರೆಗೆ ಉತ್ತರಿಸಿರಲಿಲ್ಲ.ಹಾಸ್ಟೆಲ್ನಲ್ಲಿ ವಿಚಾರಿಸಿದಾಗ ಎರಡು ದಿನಗಳ ಹಿಂದೆಯೇ ಹಾಸ್ಟೆಲ್ ತೊರೆದಿರುವುದಾಗಿ ತಿಳಿಸಿದ್ದರು. ಈ ಕಾರಣ ಶಿವಮೊಗ್ಗ ಠಾಣೆಯಲ್ಲಿ ಮಗ ಕಾಣೆಯಾದ ಬಗ್ಗೆ ದೂರು ನೀಡಿದ್ದೆವು’ ಎಂದು ಅರುಣ್ ತಂದೆಯೋಗೇಂದ್ರ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪೊಲೀಸರು ಮೊಬೈಲ್ ಕರೆಯ ಜಾಡು ಹಿಡಿದು ಹೊರಟಾಗ ಶೆಟ್ಟಿಕೆರೆ ಬಸವಾಪುರ ನಡುವಿನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಿವಮೊಗ್ಗದ ಎಎಸ್ಪಿ ಶೇಖರ್, ಡಿವೈಎಸ್ಪಿ ಉಮೇಶ್ ನಾಯಕ್, ಸಿಪಿಐ ಸಂಜೀವ್ ಕುಮಾರ್, ಪಿಎಸ್ಐ ನವೀನ್ ಕುಮಾರ್ ಹಾಗೂ ರಿಪ್ಪನ್ಪೇಟೆ ಪಿಎಸ್ಐ ಪಾರ್ವತಿಬಾಯಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong>ಶಿವಮೊಗ್ಗದ ಜೆಎನ್ಇ ಕಾಲೇಜಿನಲ್ಲಿ ದ್ವಿತೀಯ ಪಿಯು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಂಕ ಗ್ರಾಮದ ವಿದ್ಯಾರ್ಥಿಅರುಣ್ ಕುಮಾರ್ (18) ಶವ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.</p>.<p>ಶೆಟ್ಟಿಕೆರೆ ಬಸವಾಪುರ ನಡುವಿನ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ.</p>.<p>ಶಿವಮೊಗ್ಗದಲ್ಲಿ ಹಾಸ್ಟೆಲ್ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಅರುಣ್ಕುಮಾರ್.</p>.<p>‘ಎರಡು ದಿನಗಳಿಂದ ಮನೆಯವರ ದೂರವಾಣಿ ಕರೆಗೆ ಉತ್ತರಿಸಿರಲಿಲ್ಲ.ಹಾಸ್ಟೆಲ್ನಲ್ಲಿ ವಿಚಾರಿಸಿದಾಗ ಎರಡು ದಿನಗಳ ಹಿಂದೆಯೇ ಹಾಸ್ಟೆಲ್ ತೊರೆದಿರುವುದಾಗಿ ತಿಳಿಸಿದ್ದರು. ಈ ಕಾರಣ ಶಿವಮೊಗ್ಗ ಠಾಣೆಯಲ್ಲಿ ಮಗ ಕಾಣೆಯಾದ ಬಗ್ಗೆ ದೂರು ನೀಡಿದ್ದೆವು’ ಎಂದು ಅರುಣ್ ತಂದೆಯೋಗೇಂದ್ರ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪೊಲೀಸರು ಮೊಬೈಲ್ ಕರೆಯ ಜಾಡು ಹಿಡಿದು ಹೊರಟಾಗ ಶೆಟ್ಟಿಕೆರೆ ಬಸವಾಪುರ ನಡುವಿನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಿವಮೊಗ್ಗದ ಎಎಸ್ಪಿ ಶೇಖರ್, ಡಿವೈಎಸ್ಪಿ ಉಮೇಶ್ ನಾಯಕ್, ಸಿಪಿಐ ಸಂಜೀವ್ ಕುಮಾರ್, ಪಿಎಸ್ಐ ನವೀನ್ ಕುಮಾರ್ ಹಾಗೂ ರಿಪ್ಪನ್ಪೇಟೆ ಪಿಎಸ್ಐ ಪಾರ್ವತಿಬಾಯಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>