<p><strong>ಶಿವಮೊಗ್ಗ: ‘</strong>ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಬೇಡಿ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.</p>.<p>ನಗರದ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆಧುನಿಕತೆಯ ಜಾಲತಾಣದಲ್ಲಿ ಕಾಣುವುದೆಲ್ಲವೂ ನಿಜವಲ್ಲ. ವಾಸ್ತವತೆಯ ಜ್ಞಾನ ಪಡೆಯಿರಿ. ಜಾಲತಾಣಗಳು ನಮ್ಮನ್ನು ಅಂಧತ್ವದ ಮೊಹದ ಬಲೆಗೆ ಸಿಲುಕಿಸುತ್ತಿವೆ. ಅಂತಹ ಆಕರ್ಷಣೆಗಳಿಂದ ಎಚ್ಚರದಿಂದಿರಿ. ವಾಸ್ತವತೆ ವಿಮರ್ಶಿಸಲು ಪ್ರಯತ್ನಿಸಿ. ಹಿರಿಯರ ಸಲಹೆಗಳನ್ನು ಕೇಳಿಸಿಕೊಳ್ಳುವ ಸಂಯಮ ಬೇಕು’ ಎಂದು ಹೇಳಿದರು.</p>.<p>ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ‘ಹದಿಹರೆಯದ ವಿದ್ಯಾರ್ಥಿನಿಯರು ಅನೇಕ ಗೊಂದಲದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಾವು ಕೂಡ ಆಧುನಿಕವಾಗಿ ಸಮಾಜಕ್ಕೆ ತೆರೆದುಕೊಳ್ಳಬೇಕು ಎಂಬ ಆತುರ ಶುರುವಾಗಿದೆ. ಹಕ್ಕುಗಳನ್ನು ಬಳಸುವಾಗ ನಿಮ್ಮ ಮೇಲಿನ ಜವಾಬ್ದಾರಿ ಬಗ್ಗೆಯೂ ಅರಿವಿರಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ವಿದ್ಯಾರ್ಥಿ ನಿಲಯದ ಮುಖ್ಯಸ್ಥೆ ಸಂಜಿದಾ ಬಾನು, ದಿವ್ಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ‘</strong>ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಬೇಡಿ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.</p>.<p>ನಗರದ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆಧುನಿಕತೆಯ ಜಾಲತಾಣದಲ್ಲಿ ಕಾಣುವುದೆಲ್ಲವೂ ನಿಜವಲ್ಲ. ವಾಸ್ತವತೆಯ ಜ್ಞಾನ ಪಡೆಯಿರಿ. ಜಾಲತಾಣಗಳು ನಮ್ಮನ್ನು ಅಂಧತ್ವದ ಮೊಹದ ಬಲೆಗೆ ಸಿಲುಕಿಸುತ್ತಿವೆ. ಅಂತಹ ಆಕರ್ಷಣೆಗಳಿಂದ ಎಚ್ಚರದಿಂದಿರಿ. ವಾಸ್ತವತೆ ವಿಮರ್ಶಿಸಲು ಪ್ರಯತ್ನಿಸಿ. ಹಿರಿಯರ ಸಲಹೆಗಳನ್ನು ಕೇಳಿಸಿಕೊಳ್ಳುವ ಸಂಯಮ ಬೇಕು’ ಎಂದು ಹೇಳಿದರು.</p>.<p>ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ‘ಹದಿಹರೆಯದ ವಿದ್ಯಾರ್ಥಿನಿಯರು ಅನೇಕ ಗೊಂದಲದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಾವು ಕೂಡ ಆಧುನಿಕವಾಗಿ ಸಮಾಜಕ್ಕೆ ತೆರೆದುಕೊಳ್ಳಬೇಕು ಎಂಬ ಆತುರ ಶುರುವಾಗಿದೆ. ಹಕ್ಕುಗಳನ್ನು ಬಳಸುವಾಗ ನಿಮ್ಮ ಮೇಲಿನ ಜವಾಬ್ದಾರಿ ಬಗ್ಗೆಯೂ ಅರಿವಿರಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ವಿದ್ಯಾರ್ಥಿ ನಿಲಯದ ಮುಖ್ಯಸ್ಥೆ ಸಂಜಿದಾ ಬಾನು, ದಿವ್ಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>