ಸರ್ಕಾರಿ ಬಸ್ ಇಲ್ಲದ ಕಾರಣ ಖಾಸಗಿ ಬಸ್ ಹಾಗೂ ಇತರೆ ವಾಹನಗಳ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿದ್ದಾರೆ.
ಗ್ರಾಮಾಂತರ ಹಾಗೂ ಇತರೆ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳು ದೈನಂದಿನ ಶಾಲಾ, ಕಾಲೇಜುಗಳ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಈಗಾಗಲೇ ಕೋವಿಡ್ ಪರಿಣಾಮ ಶಾಲಾ–ಕಾಲೇಜುಗಳಲ್ಲಿ ತರಗತಿ ನಡೆಯುವುದು ತೀರಾ ವಿರಳವಾಗಿದೆ. ಎಸ್ಸೆಸ್ಸೆಲ್ಸಿ ಪಿಯು ಪರೀಕ್ಷೆಗಳು ಸಮೀಪಿಸುತ್ತಿವೆ.
ಪದವಿ ಪರೀಕ್ಷೆ ಈಗಾಗಲೇ ಆರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ, ಸಾರ್ವಜನಿಕರ ಅನುಕೂಲಕ್ಕಾಗಿ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.