<p>ಶಿವಮೊಗ್ಗ: ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗಾಡಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಉಲ್ಲಾಸ್ ಮೆಸ್ತ, ಶಾಲೆಯ ಮುಖ್ಯ ಶಿಕ್ಷಕ ಕೆಂಡಪ್ಪ, ಒಕ್ಕೂಟದ ಅಧ್ಯಕ್ಷೆ ದಿವ್ಯಾ, ಯೋಜನೆಯ ಕೃಷಿ ಅಧಿಕಾರಿ ಎಂ. ರಾಘವೇಂದ್ರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಲಯ ಮೇಲ್ವಿಚಾರಕ ಪ್ರಶಾಂತ ಸ್ವಾಗತಿಸಿದರು. ಒಕ್ಕೂಟದ ಸದಸ್ಯೆ ಸಿಂಧೂ ಪ್ರಾರ್ಥನೆ ಮಾಡಿದರು. ಸಂಘದ ಸದಸ್ಯರು, ಅರಣ್ಯಾಧಿಕಾರಿಗಳು ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಆವರಣದ ಮುಂದೆ ಗಿಡ ನೆಡಲಾಯಿತು. ಸದಸ್ಯರಿಗೆ ಗಿಡ ವಿತರಣೆ ಮಾಡಲಾಯಿತು. ಈ ವೇಳೆ ಶಾಲೆಯ ಮಕ್ಕಳು ಮತ್ತು ಸದಸ್ಯರಿಗೆ ಪರಿಸರ ಸಂರಕ್ಷಣೆ ಮತ್ತು ಗಿಡ ನಾಟಿಯ ಬಗ್ಗೆ ಯೋಜನಾಧಿಕಾರಿ ಮಾಹಿತಿ ನೀಡಿದರು. ಪರಿಸರ ಕಾಳಜಿ ಬೆಳೆಸಿಕೊಳ್ಳಲು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಗಾಡಿಕೊಪ್ಪ ಸೇವಾ ಪ್ರತಿನಿಧಿ ಸುಪ್ರಿಯಾ, ಆಲ್ಕೊಳ ಸೇವಾ ಪ್ರತಿನಿಧಿ ಪೂರ್ಣಿಮಾ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗಾಡಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಉಲ್ಲಾಸ್ ಮೆಸ್ತ, ಶಾಲೆಯ ಮುಖ್ಯ ಶಿಕ್ಷಕ ಕೆಂಡಪ್ಪ, ಒಕ್ಕೂಟದ ಅಧ್ಯಕ್ಷೆ ದಿವ್ಯಾ, ಯೋಜನೆಯ ಕೃಷಿ ಅಧಿಕಾರಿ ಎಂ. ರಾಘವೇಂದ್ರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಲಯ ಮೇಲ್ವಿಚಾರಕ ಪ್ರಶಾಂತ ಸ್ವಾಗತಿಸಿದರು. ಒಕ್ಕೂಟದ ಸದಸ್ಯೆ ಸಿಂಧೂ ಪ್ರಾರ್ಥನೆ ಮಾಡಿದರು. ಸಂಘದ ಸದಸ್ಯರು, ಅರಣ್ಯಾಧಿಕಾರಿಗಳು ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಆವರಣದ ಮುಂದೆ ಗಿಡ ನೆಡಲಾಯಿತು. ಸದಸ್ಯರಿಗೆ ಗಿಡ ವಿತರಣೆ ಮಾಡಲಾಯಿತು. ಈ ವೇಳೆ ಶಾಲೆಯ ಮಕ್ಕಳು ಮತ್ತು ಸದಸ್ಯರಿಗೆ ಪರಿಸರ ಸಂರಕ್ಷಣೆ ಮತ್ತು ಗಿಡ ನಾಟಿಯ ಬಗ್ಗೆ ಯೋಜನಾಧಿಕಾರಿ ಮಾಹಿತಿ ನೀಡಿದರು. ಪರಿಸರ ಕಾಳಜಿ ಬೆಳೆಸಿಕೊಳ್ಳಲು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಗಾಡಿಕೊಪ್ಪ ಸೇವಾ ಪ್ರತಿನಿಧಿ ಸುಪ್ರಿಯಾ, ಆಲ್ಕೊಳ ಸೇವಾ ಪ್ರತಿನಿಧಿ ಪೂರ್ಣಿಮಾ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>