ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಧ್ಯಮಗಳಲ್ಲಿ ಬೆಳಿಗ್ಗೆಯಿಂದ ರಾತ್ರಿ ಮಲಗುವವರೆಗೂ ಅವರ ಸುದ್ದಿಯನ್ನು ಪ್ರಸಾರ ಮಾಡುತ್ತೀರಿ, ನಿಮಗೆ ಬೇರೆ ವಿಷಯವೇ ಇಲ್ಲವೇ? ಅವರು ಏನು ಹೇಳಿದರು, ಇವರು ಏನು ಹೇಳಿದ್ರೂ ಅಂತ ಅವರ ಬಗ್ಗೆನೇ ತೋರಿಸುತ್ತಿದ್ದೀರಿ. ಅದಕ್ಕೆ ಏನಾದರೂ ಅರ್ಥವಿದೆಯೇ? ಅವರು ಎಳೆದುಕೊಂಡು ಹೋಗುತ್ತಿದ್ದಾರೆ. ನೀವು ಹೋಗುತ್ತಿದ್ದೀರಾ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.