ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಲತಾ, ಕುಮಾರಸ್ವಾಮಿ ಆರೋಪ–ಪ್ರತ್ಯಾರೋಪ ನಿಲ್ಲಿಸಲಿ: ಈಶ್ವರಪ್ಪ

Last Updated 10 ಜುಲೈ 2021, 14:39 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಮಂಡ್ಯದಲ್ಲಿನ ಗಣಿಗಾರಿಕೆ ಸಂಬಂಧ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪ–ಪ್ರತ್ಯಾರೋಪ ಮಾಡುವುದನ್ನು ನಿಲ್ಲಿಸಬೇಕು. ಅವರು ನಿಲ್ಲಿಸುತ್ತಾರೋ ಇಲ್ಲವೋ, ನೀವು ಮಾಧ್ಯಮದವರಾದರೂ ಅದನ್ನು ತೋರಿಸುವುದನ್ನು ನಿಲ್ಲಿಸಿ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಖಾರವಾಗಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಧ್ಯಮಗಳಲ್ಲಿ ಬೆಳಿಗ್ಗೆಯಿಂದ ರಾತ್ರಿ ಮಲಗುವವರೆಗೂ ಅವರ ಸುದ್ದಿಯನ್ನು ಪ್ರಸಾರ ಮಾಡುತ್ತೀರಿ, ನಿಮಗೆ ಬೇರೆ ವಿಷಯವೇ ಇಲ್ಲವೇ? ಅವರು ಏನು ಹೇಳಿದರು, ಇವರು ಏನು ಹೇಳಿದ್ರೂ ಅಂತ ಅವರ ಬಗ್ಗೆನೇ ತೋರಿಸುತ್ತಿದ್ದೀರಿ. ಅದಕ್ಕೆ ಏನಾದರೂ ಅರ್ಥವಿದೆಯೇ? ಅವರು ಎಳೆದುಕೊಂಡು ಹೋಗುತ್ತಿದ್ದಾರೆ. ನೀವು ಹೋಗುತ್ತಿದ್ದೀರಾ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೆಆರ್‌ಎಸ್‌ ಬಿರುಕು ವಿಚಾರವಾಗಿ ಸಚಿವ ಮುರುಗೇಶ ನಿರಾಣಿ ಮಾತನಾಡಿದ್ದಾರೆ. ಸಾಕು ಇಲ್ಲಿಗೆ ನಿಲ್ಲಿಸಿಬಿಡಿ.ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ’ ಎಂದು ಹೇಳಿದರು.

‘ಸುಮಲತಾ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಬಗ್ಗೆ ನನಗೆ ಗೌರವವಿದೆ. ನಾನು ಅವರಿಬ್ಬರ ಬಗ್ಗೆ ಟೀಕೆ ಮಾಡಲು ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT