<p><strong>ಸಾಗರ: </strong>ಕಾಕಾಲ್ ಸಂಸ್ಥೆಯು ಶಿರಸಿಯ ತೋಟಗಾರ್ಸ್ ಸೊಸೈಟಿ ಯ ಸಹಯೋಗದೊಂದಿಗೆ ಹೆಗ್ಗೋಡು ಗ್ರಾಮದ ಸಮೀಪ ಸೂಪರ್ ಮಾರ್ಕೆಟ್ ಆರಂಭಿಸು ತ್ತಿದೆ ಎಂದು ಇನ್ಫೊಸಿಸ್ ನಿವೃತ್ತ ಅಧಿಕಾರಿ ಹಾಗೂ ಕಾಕಾಲ್ ಸಂಸ್ಥೆಯ ಪ್ರಮುಖರಾದ ಚಂದ್ರ ಶೇಖರ್ ಕಾಕಾಲ್ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಗ್ರಾಮೀಣ ಪ್ರದೇಶವೊಂದರಲ್ಲಿ ಸೂಪರ್ ಮಾರ್ಕೆಟ್ ಇದೇ ಮೊದಲ ಬಾರಿಗೆ ಆರಂಭವಾಗುತ್ತಿದೆ. ಹಳ್ಳಿಯ ಜನರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಹಳ್ಳಿಯಲ್ಲೇ ಖರೀದಿಸಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಈ ಮಾರ್ಕೆಟ್ ತೆರೆಯಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸೂಪರ್ ಮಾರ್ಕೆಟ್ನಲ್ಲಿ ದಿನ ಬಳಕೆಯ ವಸ್ತುಗಳ ಜತೆಗೆ ಕೃಷಿ ಪರಿಕರಗಳು ಕೂಡ ಲಭ್ಯವಿರುತ್ತವೆ. ಅಲ್ಲದೆ ಕೃಷಿಗೆ ಸಂಬಂಧಿಸಿದ ಕಾರ್ಯಾಗಾರ, ಪ್ರಾತ್ಯಕ್ಷಿಕೆ, ಸಂವಾದಗಳನ್ನು ನಡೆಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಭವಿಷ್ಯದಲ್ಲಿ ಅಡಿಕೆ ಖರೀದಿ ಕೇಂದ್ರ ಆರಂಭಿಸುವ ಯೋಜನೆಯೂ ಇದೆ ಎಂದರು.</p>.<p>ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದಲೂ ನೂತನ ಸಂಸ್ಥೆ ಆರಂಭಿಸಲಾಗುತ್ತಿದೆ. ಕಾಕಾಲ್ ಕಾಲೇಜಿನಲ್ಲಿ ಕಲಿತಿರುವ ವಿದ್ಯಾರ್ಥಿಗಳಿಗೆ ಇಲ್ಲಿ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ಕಾಕಾಲ್ ಸಂಸ್ಥೆಯ ಗಣೇಶ್ ಕಾಕಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಕಾಕಾಲ್ ಸಂಸ್ಥೆಯು ಶಿರಸಿಯ ತೋಟಗಾರ್ಸ್ ಸೊಸೈಟಿ ಯ ಸಹಯೋಗದೊಂದಿಗೆ ಹೆಗ್ಗೋಡು ಗ್ರಾಮದ ಸಮೀಪ ಸೂಪರ್ ಮಾರ್ಕೆಟ್ ಆರಂಭಿಸು ತ್ತಿದೆ ಎಂದು ಇನ್ಫೊಸಿಸ್ ನಿವೃತ್ತ ಅಧಿಕಾರಿ ಹಾಗೂ ಕಾಕಾಲ್ ಸಂಸ್ಥೆಯ ಪ್ರಮುಖರಾದ ಚಂದ್ರ ಶೇಖರ್ ಕಾಕಾಲ್ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಗ್ರಾಮೀಣ ಪ್ರದೇಶವೊಂದರಲ್ಲಿ ಸೂಪರ್ ಮಾರ್ಕೆಟ್ ಇದೇ ಮೊದಲ ಬಾರಿಗೆ ಆರಂಭವಾಗುತ್ತಿದೆ. ಹಳ್ಳಿಯ ಜನರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಹಳ್ಳಿಯಲ್ಲೇ ಖರೀದಿಸಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಈ ಮಾರ್ಕೆಟ್ ತೆರೆಯಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸೂಪರ್ ಮಾರ್ಕೆಟ್ನಲ್ಲಿ ದಿನ ಬಳಕೆಯ ವಸ್ತುಗಳ ಜತೆಗೆ ಕೃಷಿ ಪರಿಕರಗಳು ಕೂಡ ಲಭ್ಯವಿರುತ್ತವೆ. ಅಲ್ಲದೆ ಕೃಷಿಗೆ ಸಂಬಂಧಿಸಿದ ಕಾರ್ಯಾಗಾರ, ಪ್ರಾತ್ಯಕ್ಷಿಕೆ, ಸಂವಾದಗಳನ್ನು ನಡೆಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಭವಿಷ್ಯದಲ್ಲಿ ಅಡಿಕೆ ಖರೀದಿ ಕೇಂದ್ರ ಆರಂಭಿಸುವ ಯೋಜನೆಯೂ ಇದೆ ಎಂದರು.</p>.<p>ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದಲೂ ನೂತನ ಸಂಸ್ಥೆ ಆರಂಭಿಸಲಾಗುತ್ತಿದೆ. ಕಾಕಾಲ್ ಕಾಲೇಜಿನಲ್ಲಿ ಕಲಿತಿರುವ ವಿದ್ಯಾರ್ಥಿಗಳಿಗೆ ಇಲ್ಲಿ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ಕಾಕಾಲ್ ಸಂಸ್ಥೆಯ ಗಣೇಶ್ ಕಾಕಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>